10:12 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಪದವಿ ಕಾಲೇಜಿನ ಹಿಜಾಬ್ ವಿವಾದ: ವಿದ್ಯಾರ್ಥಿ  ಮುಖಂಡರ ಜತೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸಚಿವ ಡಾ.ಅಶ್ವತ್ಥ ನಾರಾಯಣ ಭೇಟಿ

19/02/2022, 10:30

ಬೆಂಗಳೂರು(reporterkarnataka.com): ನ್ಯಾಯಾಲಯದ ಸ್ಪಷ್ಟ ಆದೇಶವಿದ್ದರೂ ಕೆಲವು ಪದವಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುತ್ತಿರುವ ಬಗ್ಗೆ ವಿದ್ಯಾರ್ಥಿ ಸಂಘಟನೆಗಳ ಮುಖಂಡರೊಂದಿಗೆ ಸಚಿವ ಅಶ್ವತ್ಥ ನಾರಾಯಣ ಅವರನ್ನು ಪ್ರತಿಪಕ್ಷ ಉಪ ನಾಯಕ ಶಾಸಕ ಯು.ಟಿ.ಖಾದರ್ ಭೇಟಿ ಮಾಡಿ ಮಾತುಕತೆ ನಡೆಸಿದರು.


ಈ ಸಂದರ್ಭದಲ್ಲಿ ಸಚಿವ  ಅಶ್ವತ್ಥ ನಾರಾಯಣ ರವರು ನಿರ್ದಿಷ್ಟ ಸಮವಸ್ತ್ರ ನಿಗದಿಪಡಿಸದ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿಜಾಬ್ ಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಮೂಡಿಸಬಾರದೆಂದು ಸ್ಪಷ್ಟವಾಗಿ ತಿಳಿಸಿದ್ದು ಕೆಲವು CBSE ಕಾಲೇಜುಗಳಲ್ಲಿ ಅಲ್ಲಿನ ಆಡಳಿತ ಮಂಡಳಿಯು ಸಮವಸ್ತ್ರ ನಿಗದಿಪಡಿಸಿದ್ದಲ್ಲಿ ಕೋರ್ಟ್ ಆದೇಶವನ್ನು ಪರಿಗಣಿಸಿ ವ್ಯವಸ್ಥಿತ ರೀತಿಯಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಕಾನೂನನ್ನು ಗೌರವಿಸುವ ಕೆಲಸ ಮಾಡಬೇಕೆಂದು ಅವರು ತಿಳಿಸಿದರು.

ಕಾಲೇಜು ಅಥವಾ ಶಾಲಾ ಗೇಟುಗಳಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ತಡೆಯುವಂತಿಲ್ಲ. ಕಾಲೇಜು ಅಥವಾ ಶಾಲಾ ಆವರಣದಲ್ಲಿ ಹಿಜಾಬ್ ಧರಿಸಬಹುದಾಗಿಯೂ, ಅಲ್ಲದೇ ಶಿಕ್ಷಕಿಯರು ಹಾಗೂ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂಬುದಾಗಿ ಸ್ಪಷ್ಟವಾಗಿ ತಿಳಿಸಿದರು.

ನಂತರ ಯು.ಟಿ.ಖಾದರ್ ನೇತೃತ್ವದ ಶಾಸಕರ ನೀಯೋಗ ಶಿಕ್ಷಣ ಸಚಿವ ನಾಗೇಶ್ ಅವರನ್ನು ಭೇಟಿ ಮಾಡಿ ಕೂಡಾ ಹಿಜಾಬ್ ವಿವಾದದ ಬಗ್ಗೆ ಮಾತುಕತೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು