3:40 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 3 ಹಂತಗಳಲ್ಲಿ ಅನ್ ಲಾಕ್ ?: 2ನೇ ಹಂತದಲ್ಲಿ ಬಸ್ , ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶ ?

07/06/2021, 09:19

ಬೆಂಗಳೂರು(reporterkarnataka news): ರಾಜ್ಯ ಜೂನ್ 14ಕ್ಕೆ ಮುನ್ನವೇ ಅನ್ ಲಾಕ್ ಆಗುವ ಎಲ್ಲ ಸಾಧ್ಯತೆಗಳಿದ್ದು, ಹಂತ ಹಂತವಾಗಿ ಈ ಪ್ರಕ್ರಿಯೆ ನಡೆಯಲಿದೆ. ಹಾಗಾದರೆ ಯಾವ ರೀತಿಯಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂಬುವುದನ್ನು ನೋಡೋಣ.

ಮೊದಲ ಹಂತದಲ್ಲಿ ದಿನಸಿ ಅಂಗಡಿ, ಕೈಗಾರಿಕೆಗಳು, ಗಾರ್ಮೆಂಟ್ಸ್, ಫ್ಯಾಕ್ಟರಿಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಹೋಟೆಲ್, ಆಟೋ, ಕ್ಯಾಬ್,  ಶೇ.50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಮೂರನೇ ಹಂತದಲ್ಲಿ ಬಾರ್ ರೆಸ್ಟೋರೆಂಟ್, ಕ್ಲಬ್‍ಗೆ ಶೇ.50ರಷ್ಟು ಸೀಟುನೊಂದಿಗೆ ಶುರು ಮಾಡಲು ಅವಕಾಶ ದೊರಕಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಲ್ಲಿ ಶೇ.3, ರಾಜ್ಯದಲ್ಲಿ ಶೇ.6ಕ್ಕೆ ಪಾಸಿಟಿವಿಟಿ ಇಳಿದರೆ ಅನ್‍ಲಾಕ್ ಆಗಲಿದೆ. ಸದ್ಯ ಬೆಂಗಳೂರಿನಲ್ಲಿ ಶೇ.4.96, ಕೆಲ ಜಿಲ್ಲೆಗಳಲ್ಲಿ ಶೇ.39ರಷ್ಟು ಪಾಸಿಟಿವಿಟಿ ರೇಟ್ ಇದೆ. ಕೆಲವೇ ದಿನಗಳಲ್ಲಿ ಪಾಸಿಟಿವಿಟಿ ರೇಟ್ ಮತ್ತಷ್ಟು ಇಳಿಯುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು