10:27 PM Wednesday22 - October 2025
ಬ್ರೇಕಿಂಗ್ ನ್ಯೂಸ್
ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

ಇತ್ತೀಚಿನ ಸುದ್ದಿ

ಮುಧೋಳ: ಬೇಡಜಂಗಮ ಬೃಹತ್ ಸಮಾವೇಶ ಸಂವಿಧಾನಬದ್ಧ ಹಕ್ಕಿಗೆ ಆಗ್ರಹ

19/02/2022, 22:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporter@gmail.com

ಮುಧೋಳದಲ್ಲಿ ಇಂದು ನಡೆದ ಬೇಡಜಂಗಮ ಬೃಹತ್ ಸಮಾವೇಶ ಇಂದು ಮುಧೋಳದಲ್ಲಿ ನಡೆಯಿತು. ಸುಮಾರು 20 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಚಳಿಗೇರಿ ಶ್ರೀಗಳು ಮಾತನಾಡಿ, ಬೇಡ ಜಂಗಮರಿಗೆ ಸಂವಿಧಾನಬದ್ಧವಾದ ಹಕ್ಕನ್ನು ನೀಡಬೇಕೆಂದು ಒತ್ತಾಯಿಸಿದರು. 

ಒಕ್ಕೂಟದ ಅಧ್ಯಕ್ಷ ಬಿಡಿ ಹಿರೇಮಠ ಅವರು ಮಾತನಾಡಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 19ನೇ ಕಾಲದಲ್ಲಿ ಬರುವ ಬೇಡಜಂಗಮ ಜಾತಿಯು ಈಗಾಗಲೇ ಸಂವಿಧಾನಾತ್ಮಕವಾಗಿದ್ದು, ಜಾತಿ ಸರ್ಟಿಫಿಕೇಟ್ ಕೇಳಿದರೆ ವೀರಶೈವ-ಲಿಂಗಾಯತ ಎಂದು ನೀಡುತ್ತಿರುವುದು ಅವೈಜ್ಞಾನಿಕ. ವೀರಶೈವ ಲಿಂಗಾಯತ ವು ಒಂದು ಪಂಥವಾಗಿದ್ದು ಅದು ಜಾತಿ ಆಗಿರುವುದಿಲ್ಲ ಎಂದು ಹೇಳಿದ ಅವರು ಮುಂದಿನ ಹೋರಾಟ ಬೆಂಗಳೂರಿನಲ್ಲಿ ಉಗ್ರವಾಗಿ ಮಾಡಲಾಗುವುದು ಎಂದು ಹೇಳಿದರು.
ರಾಜ್ಯಾಧ್ಯಕ್ಷ ದ್ವಾರಕೀಶ್ ಮಾತನಾಡಿ, ಸಮಾಜದಲ್ಲಿ ಜಂಗಮ ಸಮಾಜಕ್ಕೆ ದೊಡ್ಡ ಗೌರವ ಇದೆ.
ದಲಿತ ಸಂಘಟನೆಯ ರಾಜಾಧ್ಯಕ್ಷ ವೆಂಕಟೇಶ್ ಅವರ  ಬೆಂಬಲವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶ ಮೇರಿಗೆ ಇನ್ನು ಎರಡು ತಿಂಗಳಲ್ಲಿ ಎಲ್ಲ ಜಂಗಮರಿಗೆ ಬೇಡ ಜಂಗಮ ಪ್ರಮಾಣಪತ್ರ ಸಿಗಲಿದೆ ಎಂದು ಹೇಳಿದರು.

ಕೆಲವು ಶಾಸಕರು ಜಂಗಮರಿಗೆ ಸಿಗಬೇಕು ಪ್ರಮಾಣ ಪತ್ರಕೆ ಅಡ್ಡಿ ಮಾಡಿದರು ಎಂದರು.

ಬೃಹತ್ ಪ್ರತಿಭಟನಾ ಮೆರವಣಿಗೆ ಮುಧೋಳ ಪಟ್ಟದಿಂದ ರನ್ನ ಕ್ರೀಡಾಂಗಣಕ್ಕೆ ಬಂದು ತಲುಪಿತು. 

ರಾಜ್ಯ ದಲಿತ ಸಂಘರ್ಷ ಸಮಿತಿಯ ವೆಂಕಟೇಶ್ ಅವರು ಮಾತನಾಡಿ, ಬೇಡ ಜಂಗಮರ ಹೋರಾಟ ನ್ಯಾಯಯುತವಾಗಿದ್ದು ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹೇಳಿದರು.

ಸಮಾವೇಶದಲ್ಲಿ ರಾಯಚೂರು ಜಿಲ್ಲಾ ಬೇಡಜಂಗಮ ಸಮಾಜದ ಮುಖಂಡರಾದ ಆದಿ ಬಸವರಾಜ್ ಸಿಂಧನೂರು, ಸಂಪಾದಕರಾದ
ವಿರುಪಾಕ್ಷಯ್ಯ ಸಾಲಿಮಠ, ರಾಯಚೂರು ಬಸವರಾಜ್ ಹಿರೇಮಠ, ಮುಸ್ಲಿಂ ಕಾರಲಕುಂಟೆ ಮಲ್ಲಿಕಾರ್ಜುನ್ ಲಿಂಗಸ್ಗೂರು ರಮೇಶ್ ಸಿಂಗ ಪತ್ರಕರ್ತ  ಬಸವರಾಜ್ ಸಿದ್ದಲಿಂಗಯ್ಯ ಸಿದ್ದಲಿಂಗಯ್ಯ ಸ್ವಾಮಿ ಮಠ ಗಣ ಮಠದಯ್ಯ ಸ್ವಾಮಿ ಶಿವಕುಮಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು