4:34 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಮುಧೋಳ: ಬೇಡಜಂಗಮ ಬೃಹತ್ ಸಮಾವೇಶ ಸಂವಿಧಾನಬದ್ಧ ಹಕ್ಕಿಗೆ ಆಗ್ರಹ

19/02/2022, 22:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporter@gmail.com

ಮುಧೋಳದಲ್ಲಿ ಇಂದು ನಡೆದ ಬೇಡಜಂಗಮ ಬೃಹತ್ ಸಮಾವೇಶ ಇಂದು ಮುಧೋಳದಲ್ಲಿ ನಡೆಯಿತು. ಸುಮಾರು 20 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಚಳಿಗೇರಿ ಶ್ರೀಗಳು ಮಾತನಾಡಿ, ಬೇಡ ಜಂಗಮರಿಗೆ ಸಂವಿಧಾನಬದ್ಧವಾದ ಹಕ್ಕನ್ನು ನೀಡಬೇಕೆಂದು ಒತ್ತಾಯಿಸಿದರು. 

ಒಕ್ಕೂಟದ ಅಧ್ಯಕ್ಷ ಬಿಡಿ ಹಿರೇಮಠ ಅವರು ಮಾತನಾಡಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 19ನೇ ಕಾಲದಲ್ಲಿ ಬರುವ ಬೇಡಜಂಗಮ ಜಾತಿಯು ಈಗಾಗಲೇ ಸಂವಿಧಾನಾತ್ಮಕವಾಗಿದ್ದು, ಜಾತಿ ಸರ್ಟಿಫಿಕೇಟ್ ಕೇಳಿದರೆ ವೀರಶೈವ-ಲಿಂಗಾಯತ ಎಂದು ನೀಡುತ್ತಿರುವುದು ಅವೈಜ್ಞಾನಿಕ. ವೀರಶೈವ ಲಿಂಗಾಯತ ವು ಒಂದು ಪಂಥವಾಗಿದ್ದು ಅದು ಜಾತಿ ಆಗಿರುವುದಿಲ್ಲ ಎಂದು ಹೇಳಿದ ಅವರು ಮುಂದಿನ ಹೋರಾಟ ಬೆಂಗಳೂರಿನಲ್ಲಿ ಉಗ್ರವಾಗಿ ಮಾಡಲಾಗುವುದು ಎಂದು ಹೇಳಿದರು.
ರಾಜ್ಯಾಧ್ಯಕ್ಷ ದ್ವಾರಕೀಶ್ ಮಾತನಾಡಿ, ಸಮಾಜದಲ್ಲಿ ಜಂಗಮ ಸಮಾಜಕ್ಕೆ ದೊಡ್ಡ ಗೌರವ ಇದೆ.
ದಲಿತ ಸಂಘಟನೆಯ ರಾಜಾಧ್ಯಕ್ಷ ವೆಂಕಟೇಶ್ ಅವರ  ಬೆಂಬಲವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶ ಮೇರಿಗೆ ಇನ್ನು ಎರಡು ತಿಂಗಳಲ್ಲಿ ಎಲ್ಲ ಜಂಗಮರಿಗೆ ಬೇಡ ಜಂಗಮ ಪ್ರಮಾಣಪತ್ರ ಸಿಗಲಿದೆ ಎಂದು ಹೇಳಿದರು.

ಕೆಲವು ಶಾಸಕರು ಜಂಗಮರಿಗೆ ಸಿಗಬೇಕು ಪ್ರಮಾಣ ಪತ್ರಕೆ ಅಡ್ಡಿ ಮಾಡಿದರು ಎಂದರು.

ಬೃಹತ್ ಪ್ರತಿಭಟನಾ ಮೆರವಣಿಗೆ ಮುಧೋಳ ಪಟ್ಟದಿಂದ ರನ್ನ ಕ್ರೀಡಾಂಗಣಕ್ಕೆ ಬಂದು ತಲುಪಿತು. 

ರಾಜ್ಯ ದಲಿತ ಸಂಘರ್ಷ ಸಮಿತಿಯ ವೆಂಕಟೇಶ್ ಅವರು ಮಾತನಾಡಿ, ಬೇಡ ಜಂಗಮರ ಹೋರಾಟ ನ್ಯಾಯಯುತವಾಗಿದ್ದು ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹೇಳಿದರು.

ಸಮಾವೇಶದಲ್ಲಿ ರಾಯಚೂರು ಜಿಲ್ಲಾ ಬೇಡಜಂಗಮ ಸಮಾಜದ ಮುಖಂಡರಾದ ಆದಿ ಬಸವರಾಜ್ ಸಿಂಧನೂರು, ಸಂಪಾದಕರಾದ
ವಿರುಪಾಕ್ಷಯ್ಯ ಸಾಲಿಮಠ, ರಾಯಚೂರು ಬಸವರಾಜ್ ಹಿರೇಮಠ, ಮುಸ್ಲಿಂ ಕಾರಲಕುಂಟೆ ಮಲ್ಲಿಕಾರ್ಜುನ್ ಲಿಂಗಸ್ಗೂರು ರಮೇಶ್ ಸಿಂಗ ಪತ್ರಕರ್ತ  ಬಸವರಾಜ್ ಸಿದ್ದಲಿಂಗಯ್ಯ ಸಿದ್ದಲಿಂಗಯ್ಯ ಸ್ವಾಮಿ ಮಠ ಗಣ ಮಠದಯ್ಯ ಸ್ವಾಮಿ ಶಿವಕುಮಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು