3:52 PM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಮುಧೋಳ: ಬೇಡಜಂಗಮ ಬೃಹತ್ ಸಮಾವೇಶ ಸಂವಿಧಾನಬದ್ಧ ಹಕ್ಕಿಗೆ ಆಗ್ರಹ

19/02/2022, 22:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporter@gmail.com

ಮುಧೋಳದಲ್ಲಿ ಇಂದು ನಡೆದ ಬೇಡಜಂಗಮ ಬೃಹತ್ ಸಮಾವೇಶ ಇಂದು ಮುಧೋಳದಲ್ಲಿ ನಡೆಯಿತು. ಸುಮಾರು 20 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಚಳಿಗೇರಿ ಶ್ರೀಗಳು ಮಾತನಾಡಿ, ಬೇಡ ಜಂಗಮರಿಗೆ ಸಂವಿಧಾನಬದ್ಧವಾದ ಹಕ್ಕನ್ನು ನೀಡಬೇಕೆಂದು ಒತ್ತಾಯಿಸಿದರು. 

ಒಕ್ಕೂಟದ ಅಧ್ಯಕ್ಷ ಬಿಡಿ ಹಿರೇಮಠ ಅವರು ಮಾತನಾಡಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 19ನೇ ಕಾಲದಲ್ಲಿ ಬರುವ ಬೇಡಜಂಗಮ ಜಾತಿಯು ಈಗಾಗಲೇ ಸಂವಿಧಾನಾತ್ಮಕವಾಗಿದ್ದು, ಜಾತಿ ಸರ್ಟಿಫಿಕೇಟ್ ಕೇಳಿದರೆ ವೀರಶೈವ-ಲಿಂಗಾಯತ ಎಂದು ನೀಡುತ್ತಿರುವುದು ಅವೈಜ್ಞಾನಿಕ. ವೀರಶೈವ ಲಿಂಗಾಯತ ವು ಒಂದು ಪಂಥವಾಗಿದ್ದು ಅದು ಜಾತಿ ಆಗಿರುವುದಿಲ್ಲ ಎಂದು ಹೇಳಿದ ಅವರು ಮುಂದಿನ ಹೋರಾಟ ಬೆಂಗಳೂರಿನಲ್ಲಿ ಉಗ್ರವಾಗಿ ಮಾಡಲಾಗುವುದು ಎಂದು ಹೇಳಿದರು.
ರಾಜ್ಯಾಧ್ಯಕ್ಷ ದ್ವಾರಕೀಶ್ ಮಾತನಾಡಿ, ಸಮಾಜದಲ್ಲಿ ಜಂಗಮ ಸಮಾಜಕ್ಕೆ ದೊಡ್ಡ ಗೌರವ ಇದೆ.
ದಲಿತ ಸಂಘಟನೆಯ ರಾಜಾಧ್ಯಕ್ಷ ವೆಂಕಟೇಶ್ ಅವರ  ಬೆಂಬಲವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶ ಮೇರಿಗೆ ಇನ್ನು ಎರಡು ತಿಂಗಳಲ್ಲಿ ಎಲ್ಲ ಜಂಗಮರಿಗೆ ಬೇಡ ಜಂಗಮ ಪ್ರಮಾಣಪತ್ರ ಸಿಗಲಿದೆ ಎಂದು ಹೇಳಿದರು.

ಕೆಲವು ಶಾಸಕರು ಜಂಗಮರಿಗೆ ಸಿಗಬೇಕು ಪ್ರಮಾಣ ಪತ್ರಕೆ ಅಡ್ಡಿ ಮಾಡಿದರು ಎಂದರು.

ಬೃಹತ್ ಪ್ರತಿಭಟನಾ ಮೆರವಣಿಗೆ ಮುಧೋಳ ಪಟ್ಟದಿಂದ ರನ್ನ ಕ್ರೀಡಾಂಗಣಕ್ಕೆ ಬಂದು ತಲುಪಿತು. 

ರಾಜ್ಯ ದಲಿತ ಸಂಘರ್ಷ ಸಮಿತಿಯ ವೆಂಕಟೇಶ್ ಅವರು ಮಾತನಾಡಿ, ಬೇಡ ಜಂಗಮರ ಹೋರಾಟ ನ್ಯಾಯಯುತವಾಗಿದ್ದು ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹೇಳಿದರು.

ಸಮಾವೇಶದಲ್ಲಿ ರಾಯಚೂರು ಜಿಲ್ಲಾ ಬೇಡಜಂಗಮ ಸಮಾಜದ ಮುಖಂಡರಾದ ಆದಿ ಬಸವರಾಜ್ ಸಿಂಧನೂರು, ಸಂಪಾದಕರಾದ
ವಿರುಪಾಕ್ಷಯ್ಯ ಸಾಲಿಮಠ, ರಾಯಚೂರು ಬಸವರಾಜ್ ಹಿರೇಮಠ, ಮುಸ್ಲಿಂ ಕಾರಲಕುಂಟೆ ಮಲ್ಲಿಕಾರ್ಜುನ್ ಲಿಂಗಸ್ಗೂರು ರಮೇಶ್ ಸಿಂಗ ಪತ್ರಕರ್ತ  ಬಸವರಾಜ್ ಸಿದ್ದಲಿಂಗಯ್ಯ ಸಿದ್ದಲಿಂಗಯ್ಯ ಸ್ವಾಮಿ ಮಠ ಗಣ ಮಠದಯ್ಯ ಸ್ವಾಮಿ ಶಿವಕುಮಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು