12:18 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮುಧೋಳ: ಬೇಡಜಂಗಮ ಬೃಹತ್ ಸಮಾವೇಶ ಸಂವಿಧಾನಬದ್ಧ ಹಕ್ಕಿಗೆ ಆಗ್ರಹ

19/02/2022, 22:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporter@gmail.com

ಮುಧೋಳದಲ್ಲಿ ಇಂದು ನಡೆದ ಬೇಡಜಂಗಮ ಬೃಹತ್ ಸಮಾವೇಶ ಇಂದು ಮುಧೋಳದಲ್ಲಿ ನಡೆಯಿತು. ಸುಮಾರು 20 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಚಳಿಗೇರಿ ಶ್ರೀಗಳು ಮಾತನಾಡಿ, ಬೇಡ ಜಂಗಮರಿಗೆ ಸಂವಿಧಾನಬದ್ಧವಾದ ಹಕ್ಕನ್ನು ನೀಡಬೇಕೆಂದು ಒತ್ತಾಯಿಸಿದರು. 

ಒಕ್ಕೂಟದ ಅಧ್ಯಕ್ಷ ಬಿಡಿ ಹಿರೇಮಠ ಅವರು ಮಾತನಾಡಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 19ನೇ ಕಾಲದಲ್ಲಿ ಬರುವ ಬೇಡಜಂಗಮ ಜಾತಿಯು ಈಗಾಗಲೇ ಸಂವಿಧಾನಾತ್ಮಕವಾಗಿದ್ದು, ಜಾತಿ ಸರ್ಟಿಫಿಕೇಟ್ ಕೇಳಿದರೆ ವೀರಶೈವ-ಲಿಂಗಾಯತ ಎಂದು ನೀಡುತ್ತಿರುವುದು ಅವೈಜ್ಞಾನಿಕ. ವೀರಶೈವ ಲಿಂಗಾಯತ ವು ಒಂದು ಪಂಥವಾಗಿದ್ದು ಅದು ಜಾತಿ ಆಗಿರುವುದಿಲ್ಲ ಎಂದು ಹೇಳಿದ ಅವರು ಮುಂದಿನ ಹೋರಾಟ ಬೆಂಗಳೂರಿನಲ್ಲಿ ಉಗ್ರವಾಗಿ ಮಾಡಲಾಗುವುದು ಎಂದು ಹೇಳಿದರು.
ರಾಜ್ಯಾಧ್ಯಕ್ಷ ದ್ವಾರಕೀಶ್ ಮಾತನಾಡಿ, ಸಮಾಜದಲ್ಲಿ ಜಂಗಮ ಸಮಾಜಕ್ಕೆ ದೊಡ್ಡ ಗೌರವ ಇದೆ.
ದಲಿತ ಸಂಘಟನೆಯ ರಾಜಾಧ್ಯಕ್ಷ ವೆಂಕಟೇಶ್ ಅವರ  ಬೆಂಬಲವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶ ಮೇರಿಗೆ ಇನ್ನು ಎರಡು ತಿಂಗಳಲ್ಲಿ ಎಲ್ಲ ಜಂಗಮರಿಗೆ ಬೇಡ ಜಂಗಮ ಪ್ರಮಾಣಪತ್ರ ಸಿಗಲಿದೆ ಎಂದು ಹೇಳಿದರು.

ಕೆಲವು ಶಾಸಕರು ಜಂಗಮರಿಗೆ ಸಿಗಬೇಕು ಪ್ರಮಾಣ ಪತ್ರಕೆ ಅಡ್ಡಿ ಮಾಡಿದರು ಎಂದರು.

ಬೃಹತ್ ಪ್ರತಿಭಟನಾ ಮೆರವಣಿಗೆ ಮುಧೋಳ ಪಟ್ಟದಿಂದ ರನ್ನ ಕ್ರೀಡಾಂಗಣಕ್ಕೆ ಬಂದು ತಲುಪಿತು. 

ರಾಜ್ಯ ದಲಿತ ಸಂಘರ್ಷ ಸಮಿತಿಯ ವೆಂಕಟೇಶ್ ಅವರು ಮಾತನಾಡಿ, ಬೇಡ ಜಂಗಮರ ಹೋರಾಟ ನ್ಯಾಯಯುತವಾಗಿದ್ದು ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹೇಳಿದರು.

ಸಮಾವೇಶದಲ್ಲಿ ರಾಯಚೂರು ಜಿಲ್ಲಾ ಬೇಡಜಂಗಮ ಸಮಾಜದ ಮುಖಂಡರಾದ ಆದಿ ಬಸವರಾಜ್ ಸಿಂಧನೂರು, ಸಂಪಾದಕರಾದ
ವಿರುಪಾಕ್ಷಯ್ಯ ಸಾಲಿಮಠ, ರಾಯಚೂರು ಬಸವರಾಜ್ ಹಿರೇಮಠ, ಮುಸ್ಲಿಂ ಕಾರಲಕುಂಟೆ ಮಲ್ಲಿಕಾರ್ಜುನ್ ಲಿಂಗಸ್ಗೂರು ರಮೇಶ್ ಸಿಂಗ ಪತ್ರಕರ್ತ  ಬಸವರಾಜ್ ಸಿದ್ದಲಿಂಗಯ್ಯ ಸಿದ್ದಲಿಂಗಯ್ಯ ಸ್ವಾಮಿ ಮಠ ಗಣ ಮಠದಯ್ಯ ಸ್ವಾಮಿ ಶಿವಕುಮಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು