1:45 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಮುಧೋಳ: ಬೇಡಜಂಗಮ ಬೃಹತ್ ಸಮಾವೇಶ ಸಂವಿಧಾನಬದ್ಧ ಹಕ್ಕಿಗೆ ಆಗ್ರಹ

19/02/2022, 22:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporter@gmail.com

ಮುಧೋಳದಲ್ಲಿ ಇಂದು ನಡೆದ ಬೇಡಜಂಗಮ ಬೃಹತ್ ಸಮಾವೇಶ ಇಂದು ಮುಧೋಳದಲ್ಲಿ ನಡೆಯಿತು. ಸುಮಾರು 20 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಚಳಿಗೇರಿ ಶ್ರೀಗಳು ಮಾತನಾಡಿ, ಬೇಡ ಜಂಗಮರಿಗೆ ಸಂವಿಧಾನಬದ್ಧವಾದ ಹಕ್ಕನ್ನು ನೀಡಬೇಕೆಂದು ಒತ್ತಾಯಿಸಿದರು. 

ಒಕ್ಕೂಟದ ಅಧ್ಯಕ್ಷ ಬಿಡಿ ಹಿರೇಮಠ ಅವರು ಮಾತನಾಡಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 19ನೇ ಕಾಲದಲ್ಲಿ ಬರುವ ಬೇಡಜಂಗಮ ಜಾತಿಯು ಈಗಾಗಲೇ ಸಂವಿಧಾನಾತ್ಮಕವಾಗಿದ್ದು, ಜಾತಿ ಸರ್ಟಿಫಿಕೇಟ್ ಕೇಳಿದರೆ ವೀರಶೈವ-ಲಿಂಗಾಯತ ಎಂದು ನೀಡುತ್ತಿರುವುದು ಅವೈಜ್ಞಾನಿಕ. ವೀರಶೈವ ಲಿಂಗಾಯತ ವು ಒಂದು ಪಂಥವಾಗಿದ್ದು ಅದು ಜಾತಿ ಆಗಿರುವುದಿಲ್ಲ ಎಂದು ಹೇಳಿದ ಅವರು ಮುಂದಿನ ಹೋರಾಟ ಬೆಂಗಳೂರಿನಲ್ಲಿ ಉಗ್ರವಾಗಿ ಮಾಡಲಾಗುವುದು ಎಂದು ಹೇಳಿದರು.
ರಾಜ್ಯಾಧ್ಯಕ್ಷ ದ್ವಾರಕೀಶ್ ಮಾತನಾಡಿ, ಸಮಾಜದಲ್ಲಿ ಜಂಗಮ ಸಮಾಜಕ್ಕೆ ದೊಡ್ಡ ಗೌರವ ಇದೆ.
ದಲಿತ ಸಂಘಟನೆಯ ರಾಜಾಧ್ಯಕ್ಷ ವೆಂಕಟೇಶ್ ಅವರ  ಬೆಂಬಲವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶ ಮೇರಿಗೆ ಇನ್ನು ಎರಡು ತಿಂಗಳಲ್ಲಿ ಎಲ್ಲ ಜಂಗಮರಿಗೆ ಬೇಡ ಜಂಗಮ ಪ್ರಮಾಣಪತ್ರ ಸಿಗಲಿದೆ ಎಂದು ಹೇಳಿದರು.

ಕೆಲವು ಶಾಸಕರು ಜಂಗಮರಿಗೆ ಸಿಗಬೇಕು ಪ್ರಮಾಣ ಪತ್ರಕೆ ಅಡ್ಡಿ ಮಾಡಿದರು ಎಂದರು.

ಬೃಹತ್ ಪ್ರತಿಭಟನಾ ಮೆರವಣಿಗೆ ಮುಧೋಳ ಪಟ್ಟದಿಂದ ರನ್ನ ಕ್ರೀಡಾಂಗಣಕ್ಕೆ ಬಂದು ತಲುಪಿತು. 

ರಾಜ್ಯ ದಲಿತ ಸಂಘರ್ಷ ಸಮಿತಿಯ ವೆಂಕಟೇಶ್ ಅವರು ಮಾತನಾಡಿ, ಬೇಡ ಜಂಗಮರ ಹೋರಾಟ ನ್ಯಾಯಯುತವಾಗಿದ್ದು ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹೇಳಿದರು.

ಸಮಾವೇಶದಲ್ಲಿ ರಾಯಚೂರು ಜಿಲ್ಲಾ ಬೇಡಜಂಗಮ ಸಮಾಜದ ಮುಖಂಡರಾದ ಆದಿ ಬಸವರಾಜ್ ಸಿಂಧನೂರು, ಸಂಪಾದಕರಾದ
ವಿರುಪಾಕ್ಷಯ್ಯ ಸಾಲಿಮಠ, ರಾಯಚೂರು ಬಸವರಾಜ್ ಹಿರೇಮಠ, ಮುಸ್ಲಿಂ ಕಾರಲಕುಂಟೆ ಮಲ್ಲಿಕಾರ್ಜುನ್ ಲಿಂಗಸ್ಗೂರು ರಮೇಶ್ ಸಿಂಗ ಪತ್ರಕರ್ತ  ಬಸವರಾಜ್ ಸಿದ್ದಲಿಂಗಯ್ಯ ಸಿದ್ದಲಿಂಗಯ್ಯ ಸ್ವಾಮಿ ಮಠ ಗಣ ಮಠದಯ್ಯ ಸ್ವಾಮಿ ಶಿವಕುಮಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು