4:11 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ವಿಜೃಂಭಣೆಯಿಂದ ನಡೆದ ತಿರುವೈಲೋತ್ಸವ ; ಸಂಕುಪೂಂಜ ದೇವುಪೂಂಜ ಕರೆಯಲ್ಲಿ ಕಳೆ ಕಟ್ಟಿದ ಕಂಬಳದ ಸಂಭ್ರಮ

19/02/2022, 22:48

ಗಣೇಶ್ ಅದ್ಯಾಪಾಡಿ ಮಂಗಳೂರು

ಮಂಗಳೂರು(Reporterkarnataka.com)ದೇವರು ನೋಡುವ ಕಂಬಳ ಎಂದೇ ಖ್ಯಾತಿ ಪಡೆದ ವಾಮಂಜೂರು ತಿರುವೈಲು ಗುತ್ತು ಸಂಕುಪೂಂಜ ದೇವುಪೂಂಜ ಜೋಡುಕೆರೆ ಕಂಬಳ ಟ್ರಸ್ಟ್ ನೇತೃತ್ವದಲ್ಲಿ ತುಳುನಾಡಿನ ಕಂಬಳ ತಿರುವೈಲೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು.


ಶಾರದಾ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಎಂ.ಬಿ.ಪುರಾಣಿಕ್ ಅವರು ಕಂಬಳವನ್ನು ಉದ್ಘಾಟಿಸಿದರು. ಕರಾವಳಿ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥರಾದ ಗಣೇಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಗೋಳಿದಡಿ ಗುತ್ತು ಗಡಿಕಾರರಾದ ವರ್ಧಮಾನ್ ದುರ್ಗಾಪ್ರಸಾದ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್.ಮಂಜುನಾಥ ಭಂಡಾರಿ, ಮರೋಳಿ ಶ್ರೀ ಸೂರ್ಯನಾರಾಯಣ ದೇವಾಲಯದ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಉದ್ಯಮಿ ನಿತಿನ್ ಶೆಟ್ಟಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್ ತಿರುವೈಲುಗುತ್ತು ಕಂಬಳ ಸಮಿತಿ ಗೌರವಾಧ್ಯಕ್ಷ ಮಿಥುನ್ ರೈ, ಅಧ್ಯಕ್ಷ ನವೀನ್ ಚಂದ್ರ ಆಳ್ವ, ಕಾರ್ಯಾಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ಮೊದಲಾದವರು ಉಪಸ್ಥಿತರಿದ್ದರು.



ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಾಲಯದ ಎದುರಿನ ಕಂಬಳ ಗದ್ದೆಯಲ್ಲಿ ನಡೆಯುತ್ತಿರುವ ಈ ಕಂಬಳೋತ್ಸವದಲ್ಲಿ 160 ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ.
ಪಾಲಿಕೆ ವ್ಯಾಪ್ತಿಯಲ್ಲಿದ್ದರೂ ತುಳು ನಾಡಿನ ಘಮಲನ್ನು ಉಳಿಸಿಕೊಂಡು ಸಾಂಪ್ರಾದಾಯಿಕವಾಗಿ ನಡೆಸಿಕೊಂಡು ಬರಲಾಗುತ್ತಿದೆ.


ಕಳೆದ ಹತ್ತು ವರ್ಷಗಳಿಂದ ತಿರುವೈಲೋತ್ಸವ ವಿಜೃಂಭಣೆಯಿಂದ ನಡೆದುಕೊಂಡು ಬರುತ್ತಿದು ಕೊರೊನಾ ಹಾಗೂ ಇನ್ನಿತರ ಎಡರು ತೊಡರುಗಳ ನಡುವೆ ಮತ್ತೊಮ್ಮೆ ಸಂಕುಪೂಂಜ ದೇವುಪೂಂಜ ಕರೆಗಳು ಕಳೆ ಕಟ್ಟಿದು ತುಳು ನಾಡ ಮಣ್ಣಿನ ಪರಿಮಳವನ್ನು ನಾಡಿನಾದ್ಯಂತ ಪಸರಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು