7:21 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Good News: ಭಾರತೀಯ ರೈಲ್ವೆ ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ತಲುಪಿಸಲಿದೆ ಪಾರ್ಸೆಲ್‌ !

21/02/2022, 10:10

ಹೊಸದಿಲ್ಲಿ(reporterkarnataka.com):

ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ. ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್‌ಗಳನ್ನು ಮಾಡುತ್ತಾರೆ.

ಈ ರೀತಿ ರೈಲ್ವೆಯಲ್ಲಿ ಕಳುಹಿಸಲಾಗುತ್ತಿದ್ದ ಪಾರ್ಸೆಲ್‌ಗಳನ್ನು ರೈಲು ನಿಲ್ದಾಣಕ್ಕೆ ಹೋಗಿ ಪಡೆದುಕೊಂಡು ಬರಬೇಕಿತ್ತು. ಆದರೆ ಇದೀಗ ಇಲಾಖೆ ಜನರಿಗೆ ಇನ್ನಷ್ಟು ಹತ್ತಿರವಾಗಿದೆ.

ಭಾರತೀಯ ರೈಲ್ವೆ ವಿವಿಧ ವಿಷಯಗಳಲ್ಲಿ ಮೇಲ್ದರ್ಜೆಗೆ ಏರುತ್ತಿರುವ ಈ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪಾರ್ಸೆಲ್‌ಗಳನ್ನು ಮನೆ ಬಾಗಿಲಿಗೆ ತರುವ ಯೋಜನೆ ಆರಂಭಿಸಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ಶೀಘ್ರವೇ ಇದು ಜನ ಸಾಮಾನ್ಯರಿಗೆ ಲಭ್ಯವಾಗಲಿದೆ.

ದೇಶದ ಯಾವುದೇ ಮೂಲೆಯಿಂದ ಚಿಕ್ಕಪುಟ್ಟ ವಸ್ತುಗಳಿಂದ ಹಿಡಿದು ಬೃಹದಾಕಾರದ ವಸ್ತುಗಳನ್ನು ಪಾರ್ಸೆಲ್‌ ಕಳುಹಿಸಿದರೆ ಅದು ಯಾರಿಗೆ ತಲುಪಬೇಕೋ ಅವರ ಮನೆಯ ಬಾಗಿಲಿಗೇ ಮುಟ್ಟಲಿದೆ.

ಇದಕ್ಕಾಗಿ ಮೊಬೈಲ್‌ನಲ್ಲಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವ ಅಗತ್ಯವಿದ್ದು, ಅದರ ಕುರಿತು ಸಂಪೂರ್ಣ ವಿವರವನ್ನು ರೈಲ್ವೆ ಇಲಾಖೆ ಶೀಘ್ರದಲ್ಲಿ ನೀಡಲಿದೆ. ಬೇರೆಲ್ಲಾ ಕೋರಿಯರ್‌ ಸರ್ವೀಸ್‌ಗಳಂತೆ ಈ ಅಪ್ಲಿಕೇಶನ್ ಸಹಾಯದಿಂದ ವಸ್ತುಗಳನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.

ಈಬಗ್ಗೆ ರೈಲ್ವೆಯು ಮನೆ-ಮನೆಗೆ ವಿತರಣಾ ಸೇವೆಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದೆ. ಈ ಮೂಲಕ ದೂರದ ಊರುಗಳಿಂದ ನಮಗೆ ಬೇಕಾಸ ವಸ್ತುಗಳನ್ನು ರೈಲು ಸೇವೆ ಮೂಲಕವೂ ಸುಲಭವಾಗಿ ಪಡೆಯಬಹುದು ಎಂದು ಇಲಾಖೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು