9:28 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಶಾಂತಿ- ಸುವ್ಯವಸ್ಥೆ ಕಾಪಾಡಲು ರಸ್ತೆಗಿಳಿದ ಖಾಕಿ ಪಡೆ: ಮಂಗಳೂರಿನಾದ್ಯಂತ ಫುಲ್ ಟ್ರಾಫಿಕ್ ಜಾಮ್

21/02/2022, 12:44

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬನ ಹತ್ಯೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಪೊಲೀಸರು ಇಂದು ಬೆಳ್ಳಂಬೆಳಗೆ ರಸ್ತೆಗಿಳಿದರು.

ನಗರದ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸರು ಪಥಸಂಚನ ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ತುಂಬಿದರೆ, ದುಷ್ಕರ್ಮಿಗಳ ಹೃದಯದಲ್ಲಿ ನಡುಕ ಉಂಟು ಮಾಡಿದರು.

ಪೊಲೀಸರಿಂದ ಪಥ ಸಂಚಲನ ಬೆಳಗ್ಗೆ 8 ಗಂಟೆಗೆ ಆರಂಭವಾಯಿತು. ಬಲ್ಲಾಳ್ ಬಾಗ್ ನಿಂದ ಶುರುವಾಗಿ ಪಿ.ವಿ.ಎಸ್ ಸರ್ಕಲ್, ಜ್ಯೋತಿ ಅಂಬೇಡ್ಕರ್, ಸರ್ಕಲ್ ಆಗಿ ಹಂಪನಕಟ್ಟಾ ಮಾರ್ಗವಾಗಿ ಪೋಲಿಸ್ ಆಯುಕ್ತರ ಕಚೇರಿ ಬಳಿ ಕೊನೆಗೊಂಡಿತು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪಥಸಂಚಲನ ಆಯೋಜಿಸಲಾಗಿತ್ತು. ಡಿಸಿಪಿ ಹರಿರಾಂ ಶಂಕರ್, ಟ್ರಾಫಿಕ್ ಎಸಿಪಿ ನಟರಾಜ್ ಸಹಿತ ಹಲವು ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳು ಪಥ ಸಂಚಲನದಲ್ಲಿ ಪಾಲ್ಗೊಂಡರು.

ಪಥ ಸಂಚಲನದಿಂದ ನಗರದ ಬಹುತೇಕ ಕಡೆಗಳಲ್ಲಿ ಬೆಳಗ್ಗೆ ಟ್ರಾಫಿಕ್ ಜಾಮ್ ಉಂಟಾಯಿತು. ಅನೇಕ ಕಡೆಗಳಲ್ಲಿ ಪಥ ಸಂಚಲನದ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಕೂಡ ಮಾಡಲಾಗಿತ್ತು.


ಕಳೆದ ಕೆಲವು ದಿನಗಳಿಂದ ಕೆಲವು ವಿಷಯಗಳು ಗೊಂದಲ ಮೂಡಿಸುವ ಹಿನ್ನೆಲೆಯಲ್ಲಿ ಅದಕ್ಕೆ ಪೂರಕವಾಗಿ ಜನತೆಯಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಹಾಗೂ ಶಾಲಾ ಕಾಲೇಜುಗಳು ಪರಿಸರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಇದನ್ನು ಆಯೋಜಿಸಲಾಗಿದೆ ಎಂದು ಪೊಲೀಸ್  ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು