4:26 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೊಡ್ಮಣ್: ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

21/02/2022, 16:12

ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವು ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಪರಿಚಯವನ್ನು ಮಾಡಿಸುವುದರ ಜೊತೆಗೆ ಅವರ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ನ ಪರ್ಯಾಯ ಖಜಾಂಚಿಗಳಾದ ಬಸ್ತಿ ಪುರುಷೋತ್ತಮ ಶೆಣೈ ಹೇಳಿದರು.

ಅವರು ಕೆನರಾ ಕಾಲೇಜಿನ ಎನ್ ಎಸ್ ಎಸ್ ಘಟಕವು “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ” ಎಂಬ ಧ್ಯೇಯವಾಕ್ಯದಡಿಯಲ್ಲಿ ಕೊಡ್ಮಣ್ ನ ದ.ಕ.ಜಿ.ಪ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಡ್ಮಣ್ ಕಾಂತಪ್ಪ ಶೆಟ್ಟಿಯವರು ಮಾತನಾಡುತ್ತಾ ಮೂವತ್ನಾಲ್ಕು ವರ್ಷಗಳ ತಮ್ಮ ಹಾಗೂ ಕೆನರಾ ಕಾಲೇಜಿನ ಅವಿನಾಭಾವ ಸಂಬಂಧವನ್ನು ನೆನಪಿಸಿಕೊಳ್ಳುತ್ತಾ,ಕುಗ್ರಾಮವಾಗಿದ್ದ ಕೊಡ್ಮಣ್ ಗ್ರಾಮದ ಅಭಿವೃದ್ಧಿಯಲ್ಲಿ ಕೆನರಾ ಕಾಲೇಜಿನ ವಿದ್ಯಾರ್ಥಿಗಳ ಕೊಡುಗೆ ಅನನ್ಯ ಎಂದು ಶ್ಲಾಘಿಸಿದರು.

ಮೇರಮಜಲು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ  ಪದ್ಮನಾಭ ಶೆಟ್ಟಿ ಕೊಟ್ಟಿಂಜ, ಕೊಡ್ಮಣ್ ಸರಕಾರಿ ಪೌಢಶಾಲೆಯ ಮುಖ್ಯೋಪಾಧ್ಯಾಯರಾದ  ರಾಮಚಂದ್ರ ರಾವ್, ಲಕ್ಷ್ಮೀಕಾಂತ ನಾಯಕ್ ಕೊಡ್ಮಣ್, ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ ರಮೇಶ್ ಬಂಗೇರ,ಮಾತೃಮಂಡಳಿ ಸದಸ್ಯರಾದ ವೀಣಾ ಕೊಡ್ಮಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೇಮಲತಾ ವಿ.ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ರಾಸೆಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಸ್ವಾಗತಿಸಿ,ವಾಣಿ ಯು.ಎಸ್.ವಂದಿಸಿದರು.ಸ್ವಯಂ ಸೇವಕಿ ಅನುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು