1:55 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಪುತ್ತೂರು: ಕಾರುಗಳು ಮುಖಾಮುಖಿ ಡಿಕ್ಕಿ; ಮಡಿಕೇರಿ ನಿವಾಸಿ ಮೃತ್ಯು; ಹಲವರಿಗೆ ಗಂಭೀರ ಗಾಯ

21/02/2022, 23:27

ಪುತ್ತೂರು(reporterkarnataka.com):
ಪುತ್ತೂರು ತಾಲೂಕಿನ ಕಾವು ಸಮೀಪದ ಕೌಡಿಚ್ಚಾರ್ ಮಡ್ಯಂಗಲ ಎಂಬಲ್ಲಿ ಕಾರುಗಳೆರಡರು ಮುಖಾಮುಖಿ ಡಿಕ್ಕಿಯಾಗಿ ಮಡಿಕೇರಿ ನಿವಾಸಿ ಮೃತಪಟ್ಟು ಮತ್ತಿಬ್ಬರು ತೀವ್ರ ಗಾಯಗೊಂಡಿದ್ದಾರೆ.

ಮಡಿಕೇರಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿ ಕಡೆ ಹೋಗುತ್ತಿದ್ದ ಐ20 ಕಾರು ನಡುವೆ ಅಪಘಾತ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿಯನ್ನು ಮಡಿಕೇರಿ ನಿವಾಸಿ ರಾಜು ಎಂದು ಗುರುತಿಸಲಾಗಿದೆ.

ಸ್ವಿಫ್ಟ್ ಕಾರಿನ ಚಾಲಕನನ್ನು ಮಂಗಳೂರಿನ ಕೈಕಂಬ ಮೊಯಿದ್ದಿನ್ ಕುಂಜ್ಞಿ ಎಂದು ಗುರುತಿಸಲಾಗಿದೆ.

ಮಂಗಳೂರಿನ ಬಜ್ಪೆ ಮೂಲದ ಕುಟುಂಬ ಮಡಿಕೇರಿ ಪ್ರವಾಸಿ ತಾಣಗಳಿಗೆ ತೆರಳಿದ್ದು  ಮರಳಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬಜ್ಪೆ ಮೂಲದ ಜ್ಯೋತಿ ಎಂಬವರು ಗಂಭೀರ ಗಾಯಗೊಂಡಿದ್ದು ದೀಪಾ ಜೊತೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಾರಿನಲ್ಲಿದ್ದ ನೇತ್ರಾವತಿ, ಬೇಬಿ ಪೂಜಾರಿ, ಚೇತನ್ ಎಂಬವರಿಗೆ ಅಲ್ಪ-ಸ್ವಲ್ಪ ಗಾಯವಾಗಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು