11:20 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯಗೊಳಿಸಲು ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ

21/02/2022, 23:49

ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ರಾಜಕೀಯಗೊಳಿಸಲು ನಡೆಸುವ ಯತ್ನ ಸಫಲವಾಗದು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲ ವಿದ್ಯಾರ್ಥಿಗಳು -ಅವರು ಯಾವುದೇ ಜಾತಿ,ಮತ, ಧರ್ಮಕ್ಕೆ ಸೇರಿರಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸುವುದು ಅತ್ಯಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಅವರು ಸಿಎನ್‌ಎನ್ ನ್ಯೂಸ್ ಗೆ ನೀಡಿದ ಸಂದರ್ಶನವೊಂದರಲ್ಲಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಶಾಲೆಗಳಲ್ಲಿ ಧರ್ಮ-ನಂಬಿಕೆಗಳಿಗೆ ಮೀರಿದ ನಡವಳಿಕೆ ವಿದ್ಯಾರ್ಥಿಗಳದಾಗಿರಬೇಕು. ಹಿಜಾಬ್ ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಇದನ್ನು ಎಲ್ಲರೂ ಒಪ್ಪಬೇಕು. ತೀರ್ಪು ಬರುವವರೆಗೂ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ವಿದ್ಯಾರ್ಥಿಗಳು ಯಾವುದೇ ನಂಬಿಕೆ, ಮತ, ಧರ್ಮಕ್ಕೆ ಸೇರಿದ್ದರೂ ಶಾಲಾ ಸಮವಸ್ತ್ರ ನಿಯಮಕ್ಕೆ ಬದ್ಧರಾಗಿರಬೇಕು .ನ್ಯಾಯಾಲಯ ತೀರ್ಪು ನೀಡಿದ ಅನಂತರ ಎಲ್ಲರೂ ಅದನ್ನು ಸ್ವೀಕರಿಸಬೇಕು ಎಂದು ಶಾ ಹೇಳಿದರು.

ಉಡುಪಿಯ ಸರಕಾರಿ ಕಾಲೇಜಿನಲ್ಲಿನ ಸುಮಾರು 100 ಮುಸ್ಲಿಂ ಬಾಲಕಿಯರ ಪೈಕಿ ಆರು ಮಂದಿ ಹಿಜಾಬ್ ಹೆಸರಿನಲ್ಲಿ ವಿವಾದ ಸೃಷ್ಟಿಸಿದ ಬಳಿಕ , ಮತೀಯವಾದಿ ಗುಂಪು ಮತ್ತು ವಿಪಕ್ಷ ಕಾಂಗ್ರೆಸ್ ಕುಮ್ಮಕ್ಕಿನೊಂದಿಗೆ ಇದು ಹಲವೆಡೆ ವಿಸ್ತರಿಸಿ ರಾಜ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಭಾರೀ ಅಡಚಣೆ ಉಂಟು ಮಾಡಿರುವುದಿಲ್ಲಿ ಉಲ್ಲೇಖನೀಯ.

ಇತ್ತೀಚಿನ ಸುದ್ದಿ

ಜಾಹೀರಾತು