3:18 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯಗೊಳಿಸಲು ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ

21/02/2022, 23:49

ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ರಾಜಕೀಯಗೊಳಿಸಲು ನಡೆಸುವ ಯತ್ನ ಸಫಲವಾಗದು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲ ವಿದ್ಯಾರ್ಥಿಗಳು -ಅವರು ಯಾವುದೇ ಜಾತಿ,ಮತ, ಧರ್ಮಕ್ಕೆ ಸೇರಿರಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸುವುದು ಅತ್ಯಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಅವರು ಸಿಎನ್‌ಎನ್ ನ್ಯೂಸ್ ಗೆ ನೀಡಿದ ಸಂದರ್ಶನವೊಂದರಲ್ಲಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಶಾಲೆಗಳಲ್ಲಿ ಧರ್ಮ-ನಂಬಿಕೆಗಳಿಗೆ ಮೀರಿದ ನಡವಳಿಕೆ ವಿದ್ಯಾರ್ಥಿಗಳದಾಗಿರಬೇಕು. ಹಿಜಾಬ್ ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಇದನ್ನು ಎಲ್ಲರೂ ಒಪ್ಪಬೇಕು. ತೀರ್ಪು ಬರುವವರೆಗೂ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ವಿದ್ಯಾರ್ಥಿಗಳು ಯಾವುದೇ ನಂಬಿಕೆ, ಮತ, ಧರ್ಮಕ್ಕೆ ಸೇರಿದ್ದರೂ ಶಾಲಾ ಸಮವಸ್ತ್ರ ನಿಯಮಕ್ಕೆ ಬದ್ಧರಾಗಿರಬೇಕು .ನ್ಯಾಯಾಲಯ ತೀರ್ಪು ನೀಡಿದ ಅನಂತರ ಎಲ್ಲರೂ ಅದನ್ನು ಸ್ವೀಕರಿಸಬೇಕು ಎಂದು ಶಾ ಹೇಳಿದರು.

ಉಡುಪಿಯ ಸರಕಾರಿ ಕಾಲೇಜಿನಲ್ಲಿನ ಸುಮಾರು 100 ಮುಸ್ಲಿಂ ಬಾಲಕಿಯರ ಪೈಕಿ ಆರು ಮಂದಿ ಹಿಜಾಬ್ ಹೆಸರಿನಲ್ಲಿ ವಿವಾದ ಸೃಷ್ಟಿಸಿದ ಬಳಿಕ , ಮತೀಯವಾದಿ ಗುಂಪು ಮತ್ತು ವಿಪಕ್ಷ ಕಾಂಗ್ರೆಸ್ ಕುಮ್ಮಕ್ಕಿನೊಂದಿಗೆ ಇದು ಹಲವೆಡೆ ವಿಸ್ತರಿಸಿ ರಾಜ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಭಾರೀ ಅಡಚಣೆ ಉಂಟು ಮಾಡಿರುವುದಿಲ್ಲಿ ಉಲ್ಲೇಖನೀಯ.

ಇತ್ತೀಚಿನ ಸುದ್ದಿ

ಜಾಹೀರಾತು