1:28 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯಗೊಳಿಸಲು ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ

21/02/2022, 23:49

ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ರಾಜಕೀಯಗೊಳಿಸಲು ನಡೆಸುವ ಯತ್ನ ಸಫಲವಾಗದು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲ ವಿದ್ಯಾರ್ಥಿಗಳು -ಅವರು ಯಾವುದೇ ಜಾತಿ,ಮತ, ಧರ್ಮಕ್ಕೆ ಸೇರಿರಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸುವುದು ಅತ್ಯಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಅವರು ಸಿಎನ್‌ಎನ್ ನ್ಯೂಸ್ ಗೆ ನೀಡಿದ ಸಂದರ್ಶನವೊಂದರಲ್ಲಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಶಾಲೆಗಳಲ್ಲಿ ಧರ್ಮ-ನಂಬಿಕೆಗಳಿಗೆ ಮೀರಿದ ನಡವಳಿಕೆ ವಿದ್ಯಾರ್ಥಿಗಳದಾಗಿರಬೇಕು. ಹಿಜಾಬ್ ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಇದನ್ನು ಎಲ್ಲರೂ ಒಪ್ಪಬೇಕು. ತೀರ್ಪು ಬರುವವರೆಗೂ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ವಿದ್ಯಾರ್ಥಿಗಳು ಯಾವುದೇ ನಂಬಿಕೆ, ಮತ, ಧರ್ಮಕ್ಕೆ ಸೇರಿದ್ದರೂ ಶಾಲಾ ಸಮವಸ್ತ್ರ ನಿಯಮಕ್ಕೆ ಬದ್ಧರಾಗಿರಬೇಕು .ನ್ಯಾಯಾಲಯ ತೀರ್ಪು ನೀಡಿದ ಅನಂತರ ಎಲ್ಲರೂ ಅದನ್ನು ಸ್ವೀಕರಿಸಬೇಕು ಎಂದು ಶಾ ಹೇಳಿದರು.

ಉಡುಪಿಯ ಸರಕಾರಿ ಕಾಲೇಜಿನಲ್ಲಿನ ಸುಮಾರು 100 ಮುಸ್ಲಿಂ ಬಾಲಕಿಯರ ಪೈಕಿ ಆರು ಮಂದಿ ಹಿಜಾಬ್ ಹೆಸರಿನಲ್ಲಿ ವಿವಾದ ಸೃಷ್ಟಿಸಿದ ಬಳಿಕ , ಮತೀಯವಾದಿ ಗುಂಪು ಮತ್ತು ವಿಪಕ್ಷ ಕಾಂಗ್ರೆಸ್ ಕುಮ್ಮಕ್ಕಿನೊಂದಿಗೆ ಇದು ಹಲವೆಡೆ ವಿಸ್ತರಿಸಿ ರಾಜ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಭಾರೀ ಅಡಚಣೆ ಉಂಟು ಮಾಡಿರುವುದಿಲ್ಲಿ ಉಲ್ಲೇಖನೀಯ.

ಇತ್ತೀಚಿನ ಸುದ್ದಿ

ಜಾಹೀರಾತು