9:18 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯಗೊಳಿಸಲು ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ

21/02/2022, 23:49

ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ರಾಜಕೀಯಗೊಳಿಸಲು ನಡೆಸುವ ಯತ್ನ ಸಫಲವಾಗದು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲ ವಿದ್ಯಾರ್ಥಿಗಳು -ಅವರು ಯಾವುದೇ ಜಾತಿ,ಮತ, ಧರ್ಮಕ್ಕೆ ಸೇರಿರಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸುವುದು ಅತ್ಯಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಅವರು ಸಿಎನ್‌ಎನ್ ನ್ಯೂಸ್ ಗೆ ನೀಡಿದ ಸಂದರ್ಶನವೊಂದರಲ್ಲಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಶಾಲೆಗಳಲ್ಲಿ ಧರ್ಮ-ನಂಬಿಕೆಗಳಿಗೆ ಮೀರಿದ ನಡವಳಿಕೆ ವಿದ್ಯಾರ್ಥಿಗಳದಾಗಿರಬೇಕು. ಹಿಜಾಬ್ ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಇದನ್ನು ಎಲ್ಲರೂ ಒಪ್ಪಬೇಕು. ತೀರ್ಪು ಬರುವವರೆಗೂ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ವಿದ್ಯಾರ್ಥಿಗಳು ಯಾವುದೇ ನಂಬಿಕೆ, ಮತ, ಧರ್ಮಕ್ಕೆ ಸೇರಿದ್ದರೂ ಶಾಲಾ ಸಮವಸ್ತ್ರ ನಿಯಮಕ್ಕೆ ಬದ್ಧರಾಗಿರಬೇಕು .ನ್ಯಾಯಾಲಯ ತೀರ್ಪು ನೀಡಿದ ಅನಂತರ ಎಲ್ಲರೂ ಅದನ್ನು ಸ್ವೀಕರಿಸಬೇಕು ಎಂದು ಶಾ ಹೇಳಿದರು.

ಉಡುಪಿಯ ಸರಕಾರಿ ಕಾಲೇಜಿನಲ್ಲಿನ ಸುಮಾರು 100 ಮುಸ್ಲಿಂ ಬಾಲಕಿಯರ ಪೈಕಿ ಆರು ಮಂದಿ ಹಿಜಾಬ್ ಹೆಸರಿನಲ್ಲಿ ವಿವಾದ ಸೃಷ್ಟಿಸಿದ ಬಳಿಕ , ಮತೀಯವಾದಿ ಗುಂಪು ಮತ್ತು ವಿಪಕ್ಷ ಕಾಂಗ್ರೆಸ್ ಕುಮ್ಮಕ್ಕಿನೊಂದಿಗೆ ಇದು ಹಲವೆಡೆ ವಿಸ್ತರಿಸಿ ರಾಜ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಭಾರೀ ಅಡಚಣೆ ಉಂಟು ಮಾಡಿರುವುದಿಲ್ಲಿ ಉಲ್ಲೇಖನೀಯ.

ಇತ್ತೀಚಿನ ಸುದ್ದಿ

ಜಾಹೀರಾತು