1:48 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿಶ್ವ ಸಾಮಾಜಿಕ ನ್ಯಾಯದಿನ; ತೃತೀಯ ಲಿಂಗಿ, ಸಾರ್ವಜನಿಕರಿಗೆ ಕಾನೂನು ಅರಿವು ನೆರವು

22/02/2022, 10:09

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ನ್ಯಾಯಾಲಯದಲ್ಲಿ, ಫೆ21ರಂದು ಕೂಡ್ಲಿಗಿ ನ್ಯಾಯಾಲಯ ಇಲಾಖೆ, ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ತಾಲೂಕಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ.ವಿಶ್ವ ಸಾಮಾಜಿಕ ನ್ಯಾಯದಿನ ಆಚರಿಸಲಾಯಿತು,

ಇದರ ಪ್ರಯುಕ್ತ ತೃತೀಯ ಲಿಂಗಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಕೆ.ಎ.ನಾಗೇಶರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತೃತೀಯ ಲಿಂಗಿಗಳಿಗಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು, ಎಲ್ಲರೂ ಶೈಕ್ಷಣಿಕಾಭಿವೃದ್ಧಿ ಹೊಂದಿ ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು. ಪ್ಯಾನಲ್ ವಕೀಲರಾದ ಸಿ. ವಿರುಪಾಕ್ಷಪ್ಪ, “ವಿಶ್ವ ಸಾಮಾಜಿಕ ನ್ಯಾಯ ದಿನ” ಕುರಿತು ಉಪನ್ಯಾಸ ನೀಡಿದರು. ಕಿರಿಯ ಶ್ರೇಣಿ ನ್ಯಾಯಾಧೀಶರಾದ ಮುರುಗೇಂದ್ರ ತುಬಾಕೆ ರವರು, ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿ ಮಾತನಾಡಿದರು.ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. “ಮೈತ್ರಿ ಯೋಜನೆಯಡಿಯ ಫಲಾನುಭವಿಗಳಿಗೆ, ಕಂದಾಯ ಇಲಾಖೆಯಿಂದ ನೀಡಲ್ಪಡುವ,ಮೈತ್ರಿ ಯೋಜನೆಯ ಮಂಜೂರು ಪತ್ರ ನೀಡಲಾಯಿತು. ಸಹಾಯಕ ಸರ್ಕಾರಿ ಅಭಿಯೋಜಕರಾದ ಹೊಸವಡ್ರು ಅಣ್ಣೇಶ, ವಕೀಲರ ಸಂಘ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ, ಉಪ ತಹಶಿಲ್ದಾರರಾದ ಹಿರಿಯ ಮಹಿಳಾ ವಕೀಲರಾದ ಜಿ.ಎನ್.ಕುಮಾರಸ್ವಾಮಿ ಮತ್ತು ಅರುಂಧತಿ ನಾಗವಿ, ಸಿಡಿಪಿಓ ನಾಗನಗೌಡ ವೇದಿಕೆಯಲ್ಲಿದ್ದರು. ಹಿರಿಯ ಮಹಿಳಾ ವಕೀಲರಾದ ಕೆ.ಹೆಚ್.ಎಮ್.ಶೈಲಜಾ  ಸ್ವಾಗತಿಸಿದರು.ಪ್ಯಾನಲ್ ವಕೀಲರಾದ ಟಿ.ಮಲ್ಲಿಕಾರ್ಜುನ ನಿರೂಪಿಸಿದರು. ಜಿ.ಎಮ್.ಮಲ್ಲಿಕಾರ್ಜುನಸ್ವಾಮಿ ವಂದಿಸಿದರು. ಕಾನೂನು ಸೇವಾಸಮಿತಿಯ ಸಿಬ್ಬಂದಿ ಹಾಗೂ ನ್ಯಾಯಾಲಯ ಸಿಬ್ಬಂದಿ,ಪಟ್ಟಣ ಸೇರಿದಂತೆ ವಿವಿದೆಡೆಗಳಿಂದ ಆಗಮಿಸಿದ್ದ ತೃತೀಯಲಿಂಗಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು