5:15 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿಶ್ವ ಸಾಮಾಜಿಕ ನ್ಯಾಯದಿನ; ತೃತೀಯ ಲಿಂಗಿ, ಸಾರ್ವಜನಿಕರಿಗೆ ಕಾನೂನು ಅರಿವು ನೆರವು

22/02/2022, 10:09

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ನ್ಯಾಯಾಲಯದಲ್ಲಿ, ಫೆ21ರಂದು ಕೂಡ್ಲಿಗಿ ನ್ಯಾಯಾಲಯ ಇಲಾಖೆ, ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ತಾಲೂಕಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ.ವಿಶ್ವ ಸಾಮಾಜಿಕ ನ್ಯಾಯದಿನ ಆಚರಿಸಲಾಯಿತು,

ಇದರ ಪ್ರಯುಕ್ತ ತೃತೀಯ ಲಿಂಗಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಕೆ.ಎ.ನಾಗೇಶರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತೃತೀಯ ಲಿಂಗಿಗಳಿಗಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು, ಎಲ್ಲರೂ ಶೈಕ್ಷಣಿಕಾಭಿವೃದ್ಧಿ ಹೊಂದಿ ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು. ಪ್ಯಾನಲ್ ವಕೀಲರಾದ ಸಿ. ವಿರುಪಾಕ್ಷಪ್ಪ, “ವಿಶ್ವ ಸಾಮಾಜಿಕ ನ್ಯಾಯ ದಿನ” ಕುರಿತು ಉಪನ್ಯಾಸ ನೀಡಿದರು. ಕಿರಿಯ ಶ್ರೇಣಿ ನ್ಯಾಯಾಧೀಶರಾದ ಮುರುಗೇಂದ್ರ ತುಬಾಕೆ ರವರು, ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿ ಮಾತನಾಡಿದರು.ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. “ಮೈತ್ರಿ ಯೋಜನೆಯಡಿಯ ಫಲಾನುಭವಿಗಳಿಗೆ, ಕಂದಾಯ ಇಲಾಖೆಯಿಂದ ನೀಡಲ್ಪಡುವ,ಮೈತ್ರಿ ಯೋಜನೆಯ ಮಂಜೂರು ಪತ್ರ ನೀಡಲಾಯಿತು. ಸಹಾಯಕ ಸರ್ಕಾರಿ ಅಭಿಯೋಜಕರಾದ ಹೊಸವಡ್ರು ಅಣ್ಣೇಶ, ವಕೀಲರ ಸಂಘ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ, ಉಪ ತಹಶಿಲ್ದಾರರಾದ ಹಿರಿಯ ಮಹಿಳಾ ವಕೀಲರಾದ ಜಿ.ಎನ್.ಕುಮಾರಸ್ವಾಮಿ ಮತ್ತು ಅರುಂಧತಿ ನಾಗವಿ, ಸಿಡಿಪಿಓ ನಾಗನಗೌಡ ವೇದಿಕೆಯಲ್ಲಿದ್ದರು. ಹಿರಿಯ ಮಹಿಳಾ ವಕೀಲರಾದ ಕೆ.ಹೆಚ್.ಎಮ್.ಶೈಲಜಾ  ಸ್ವಾಗತಿಸಿದರು.ಪ್ಯಾನಲ್ ವಕೀಲರಾದ ಟಿ.ಮಲ್ಲಿಕಾರ್ಜುನ ನಿರೂಪಿಸಿದರು. ಜಿ.ಎಮ್.ಮಲ್ಲಿಕಾರ್ಜುನಸ್ವಾಮಿ ವಂದಿಸಿದರು. ಕಾನೂನು ಸೇವಾಸಮಿತಿಯ ಸಿಬ್ಬಂದಿ ಹಾಗೂ ನ್ಯಾಯಾಲಯ ಸಿಬ್ಬಂದಿ,ಪಟ್ಟಣ ಸೇರಿದಂತೆ ವಿವಿದೆಡೆಗಳಿಂದ ಆಗಮಿಸಿದ್ದ ತೃತೀಯಲಿಂಗಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು