4:59 PM Tuesday21 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ವಿವಾದಿತ ಹೇಳಿಕೆ ಕುರಿತು ಈಶ್ವರಪ್ಪರ ಕರೆಸಿ ಛೀಮಾರಿ ಹಾಕುವೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ

22/02/2022, 14:19

ಹೊಸದಿಲ್ಲಿ(reporterkarnataka.com):

ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕರೆಸಿ ಛೀಮಾರಿ ಹಾಕುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಡ್ಡಾ ಅವರು, “ನಾನು ಈಶ್ವರಪ್ಪ ಅವರಿಗೆ ಕರೆ ಮಾಡಿ ಕೇಸರಿ ಧ್ವಜದ ಕುರಿತ ಅವರ ಹೇಳಿಕೆಗಾಗಿ ಅವರನ್ನು ಬೈದಿದ್ದೇನೆ” ಎಂದು ಹೇಳಿದ್ದಾರೆ.

ಭಗವಾಧ್ವಜ ರಾಷ್ಟ್ರಧ್ವಜವಾಗಲು ಸಾಧ್ಯವೆ ಇಲ್ಲ. ಇಂತಹ ಮಾತಗಳನ್ನು ಆಡಬಾರದು. ಇಂತಹ ವಿಷಯಗಳಲ್ಲಿ ನಾನು ತಡ ಮಾಡುವುದೇ ಇಲ್ಲ. ನಾವು ಕಾನೂನಿನ ಆಧಾರದಲ್ಲಿ ನಡೆದುಕೊಳ್ಳುವ ಜನ. ಸಂವಿಧಾನವನ್ನು ಒಪ್ಪುವವರು, ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಇರುವವರು. ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಕ್ಷಮೆ ಇರಲಿ ಎಂದು ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಫೆಬ್ರವರಿ 9ರಂದು ಪ್ರತಿಕ್ರಿಯಿಸಿದ್ದ ಸಚಿವ  ಈಶ್ವರಪ್ಪ, “ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು” ಎಂದು ವಿವಾದಿತ ಹೇಳಿಕೆ ನೀಡಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು