12:53 PM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಉಡುಪಿ: ಬಾವಿಗೆ ಬಿದ್ದ ಮೂರು ಕುರಿಗಳ ರಕ್ಷಣೆ; ಅಗ್ನಿಶಾಮಕದಳದ ಸಿಬ್ಬಂದಿಗಳ ಕಾರ್ಯಾಚರಣೆ

23/02/2022, 12:42

ಉಡುಪಿ(reporterkarnataka.com): 

ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಮೀಪ ಬಾವಿಗೆ ಬಿದ್ದ ಮೂರು ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಇಲ್ಲಿನ ಮನೆಯೊಂದರ ಬಾವಿಯಲ್ಲಿ ಮೂರು ಕುರಿಗಳು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕದ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸುಧಾಕರ್ ಹಗ್ಗದ ಸಹಾಯದಿಂದ ಬಾವಿಗಿಳಿದು, ಅಗ್ನಿಶಾಮಕದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೂರು ಕುರಿಗಳನ್ನು ರಕ್ಷಣೆ ಮಾಡಿದ್ದಾರೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಉಡುಪಿ ಜಿಲ್ಲಾ ಅಧಿಕಾರಿ ವಸಂತ್ ಕುಮಾರ್, ಠಾಣಾಧಿಕಾರಿ ಸತೀಶ್, ಸಹಾಯಕ ಠಾಣಾಧಿಕಾರಿ ಮೀರ್ ಮಹಮ್ಮದ್ ಗೌಸ್, ಲೀಡಿಂಗ್ ಫೈಯರ್ ಮ್ಯಾನ್ ಅಶ್ವಿನ್ ಸನಿಲ್, ಚಾಲಕ ಶಂಕರ್ ದಾಸ್, ಸಿಬ್ಬಂದಿಗಳಾದ ಉಮೇಶ್, ಸುಧಾಕರ್ ಹಾಗೂ ಹೋಮ್ ಗಾರ್ಡ್ ಅಕ್ಷಯ್ ಕುಮಾರ್ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು