4:30 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹಿರಿಯಡಕ: ಪರೀಕ್ಷೆಯ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣಿಗೆ ಶರಣು

23/02/2022, 14:36

ಹಿರಿಯಡ್ಕ(reporterkarnataka.com): ಪರೀಕ್ಷೆಯ ಭಯದಿಂದ ಬಾಲಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ‌ ತಾಲೂಕಿನ ಬೊಮ್ಮರಬೆಟ್ಟು ಗ್ರಾಮದ ಕಾಜರಗುತ್ತು ರಸ್ತೆ ಎಂಬಲ್ಲಿ ನಡೆದಿದೆ.

ಬೊಮ್ಮರಬೆಟ್ಟು ಗ್ರಾಮದ ಕಾಜರಗುತ್ತು ರಸ್ತೆಯ ಕುಕ್ಕುದಕಟ್ಟೆ ನಿವಾಸಿ ಜಿಸಾನ್ ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ. ಈತ ಮಣಿಪಾಲ ಎಂಜೆಸಿ ಕಾಲೇಜಿನಲ್ಲಿ 10ನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದನು. ಆದರೆ, ಕಳೆದ ಒಂದು ವಾರದಿಂದ ಶಾಲೆಗೆ ಸರಿಯಾಗಿ ಹೋಗದೆ ಮನೆಯಲ್ಲಿಯೇ ಇದ್ದನು. ಅಲ್ಲದೆ, ಫೆ.21ರಂದು ಪರೀಕ್ಷೆ ಇದ್ದು, ಅದಕ್ಕೂ ಹೋಗದೆ ಮನೆಯಲ್ಲಿಯೇ ಇದ್ದನು.‌ ಇದಕ್ಕೆ ತಾಯಿ ಆಕ್ಷೇಪ ವ್ಯಕ್ತಪಡಿಸಿದ್ದರು‌. ತಾಯಿ ಅಂದು ಬೆಳಿಗ್ಗೆ 9:15 ಕ್ಕೆ ಕೆಲಸಕ್ಕೆ ಹೋಗಿದ್ದರು. ಆಗ ಜಿಸಾನ್ ಮನೆಯಲ್ಲಿಯೇ ಇದ್ದನು. ಅವರು ಸಂಜೆ 6:15ಕ್ಕೆ ಕೆಲಸ ಮುಗಿಸಿ ಮನೆಗೆ ಬಂದಾಗ ಎದುರು ಬಾಗಿಲಿನ ಚಿಲಕ ಹಾಕಿದ್ದು, ಹಿಂದಿನ ಬಾಗಿಲಿನಿಂದ ಒಳಗೆ ಹೋಗಿ ನೋಡಿದಾಗ ಜಿಸಾನ್ ಮಲಗುವ ಕೋಣೆಯಲ್ಲಿ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಪರೀಕ್ಷೆಯ ಭಯದಿಂದ ಅಥವಾ ಇನ್ಯಾವುದೋ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು