8:46 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮಲ್ಪೆ ಹೋಟೆಲ್ ಗೆ ದಾಳಿ ಪ್ರಕರಣ: ಶಾಸಕ ರಘುಪತಿ ಭಟ್ ಕೈವಾಡ: ಅಸೀಲ್ ಅಕ್ರಂ ಆರೋಪ

23/02/2022, 18:52

ಉಡುಪಿ(reporterkarnataka.com):
ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹಝ್ರ ಶಿಫಾ ಅವರ ತಂದೆಯ ಮಲ್ಪೆ ಹೊಟೇಲಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆ ನಡೆಸಿರುವ ಘಟನೆ ಮಲ್ಪೆಯಲ್ಲಿ ನಡೆದಿದ್ದು, ಇದರ ಹಿಂದೆ ಶಾಸಕ ರಘುಪತಿ ಭಟ್ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಫೆ.21ರಂದು ರಾತ್ರಿ ಬೈಕಿನಲ್ಲಿ ಬಂದ ದೀಪಕ್ ಕುಮಾರ್ ಹಾಗೂ ಇತರರು ಹೊಟೇಲಿಗೆ ಕಲ್ಲು ತೂರಾಟ ನಡೆಸಿ ಕಿಟಕಿ ಗಾಜನ್ನು ಪುಡಿಗೈದು, ಬಳಿಕ ತನಗೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆಂದು ಸೈಫ್ ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಸಂಬಂಧ ಈವರೆಗೆ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಸಶಸ್ತ್ರ ಮೀಸಲು ಪಡೆಯ ತುಕಡಿಯನ್ನು ನಿಯೋಜಿಸಲಾಗಿದೆ.

ಹೊಟೇಲಿಗೆ ದಾಳಿ ಹಾಗೂ ವಿದ್ಯಾರ್ಥಿನಿಯ ಸಹೋದರನ ಹಲ್ಲೆಯ ಹಿಂದೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸಿ, ಕೂಡಲೇ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಸಿಎಫ್ ಐ ಉಡುಪಿ ಅಧ್ಯಕ್ಷ ಆಸೀಲ್ ಅಕ್ರಂ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು