9:29 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಶಿವಮೊಗ್ಗ ಕೊಲೆ ಪ್ರಕರಣ: ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ 

24/02/2022, 10:01

ಬೆಂಗಳೂರು(reporterkarnataka.com):

  • ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ ಎಂದರು.

    ಕಾಂಗ್ರೆಸ್ ಅನುಭವದ ಮಾತು:

    ಇದು ಸರಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, ಕಾಂಗ್ರೆಸ್ ನವರು ಈ ಹಿಂದೆ ಸರಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳು ಆಡಿದ್ದಾರೆ ಲೇವಡಿ ಮಾಡಿದರು.

    ದಿಲ್ಲಿ ಪ್ರಯಾಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ದಿಲ್ಲಿ ಹೋಗುವ ಉದ್ದೇಶ ಇಲ್ಲ ಎಂದರು.

  • ಇತ್ತೀಚಿನ ಸುದ್ದಿ

    ಜಾಹೀರಾತು