10:06 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ಜೀವಂತ: ನರೇಗಾ ಕಾಮಗಾರಿಯಲ್ಲಿ ಶಾಲಾ ಮಕ್ಕಳ ಬಳಕೆ !!

07/06/2021, 16:13

ಡಿ ಶರಣಗೌಡ ಗೊರೆಬಾಳ್ ಸಿಂಧನೂರು 

info.reporterkarnataka@ gmail.com

ಸರಕಾರಿ ಅಧಿಕಾರಿಗಳು ತಮ್ಮಲ್ಲಿ ಬಾಲ ಕಾರ್ಮಿಕರು ಇಲ್ಲ ಅಂತ ಎಷ್ಟೇ ಹೇಳಿದರೂ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸುವುದನ್ನು ನಾವು ಕಾಣುತ್ತೇವೆ. ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಸರಕಾರದ ನರೇಗಾ ಯೋಜನೆಯಡಿ ನಡೆಯುವ ಕಾಮಗಾರಿಗೆ ಶಾಲಾ ಮಕ್ಕಳನ್ನು ಬಳಸಿರುವುದು ಬೆಳಕಿಗೆ ಬಂದಿದೆ.

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಭೀಮರಾಜ್ ಕ್ಯಾಂಪ್ ನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಕೆಲಸದಲ್ಲಿ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಅದು ಕೂಡ ಒಬ್ಬಿಬ್ಬರು ಹುಡುಗರಲ್ಲ, ಬರೋಬ್ಬರಿ 12 ಮಂದಿ ಮಕ್ಕಳನ್ನು ಕೆಲಸಕ್ಕೆ ಬಳಸಲಾಗಿದೆ.

ಶಾಲಾ ಮಕ್ಕಳು ಮಾತ್ರವಲ್ಲದೆ, ಜಾಬ್ ಕಾರ್ಡ್ ಇಲ್ಲದವರು ಹಾಗೂ ಮನೆಯಲ್ಲಿ ಇಲ್ಲದವರನ್ನು ನೆರೇಗಾ ಕೆಲಸದಲ್ಲಿ ಕಾನೂನುಬಾಹಿರವಾಗಿ ತೊಡಗಿಸಲಾಗಿತ್ತು. ಸುಮಾರು 40 ಮಂದಿ ಜಾಬ್ ಕಾರ್ಡ್ ಇಲ್ಲದವರು ಕೆಲಸ ಮಾಡುತ್ತಿದ್ದರು.

ಇದರ ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಿ.ಪ್ರಮೀಳಾ , ಪಿಡಿಒ ವನಜಾಕ್ಷಿ ಅವರು ಕೆಲಸ ಕಲ್ಪಿಸಿದ ಮೇಟಿಗಳನ್ನು ತರಾಟೆಗೆ ತಗೆದು ಕೊಂಡು  ಶಾಲಾ ಮಕ್ಕಳು ಹಾಗೂ ಜಾಬ್ ಕಾರ್ಡ್ ಇಲ್ಲದವರನ್ನು ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು