5:58 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ರಷ್ಯಾ-ಉಕ್ರೇನ್ ಯುದ್ಧ ; ಉಕ್ರೇನ್‌ನಲ್ಲಿ ಸಿಲುಕಿರುವ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು !

24/02/2022, 18:11

ಮಂಗಳೂರು
ReporterKarnataka.com

ಮಂಗಳೂರಿ‌ನ ದೇರೇಬೈಲ್ ನಿವಾಸಿ ಅನೈನಾ ಅನ್ನ ಅವರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದು, ಉಕ್ರೇನ್‌ನ ಖಾರ್ಕಿವ್ ನಗರದ ಗಡಿ ಭಾಗದಲ್ಲಿ ‌ನೆಲೆಸಿರೋ ಅನೈನಾ ಮಂಗಳೂರಿನಲ್ಲಿರೋ ತಾಯಿ ಸಂಧ್ಯಾ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ.
ಸದ್ಯ ಉಕ್ರೇನ್‌ನಲ್ಲಿ ಸುರಕ್ಷಿತ ಸ್ಥಳದಲ್ಲಿರೋ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಉಕ್ರೇನ್‌ ನಲ್ಲಿ ಸಿಲುಕಿರುವ ಮತ್ತೋರ್ವ ಮಂಗಳೂರು ಪಡೀಲು ನಿವಾಸಿ ಕ್ಲಾಟನ್ ಅವರು ಸದ್ಯಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ.

ಜತೆಗೆ ಉಕ್ರೇನ್ ವಿದ್ಯಾರ್ಥಿ ಪೋಷಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ಸಂಪರ್ಕಿಸಿದ್ದಾರೆ. ಕ್ಲಾಟನ್ ಇರುವ ಕಡೆಯಿಂದ ನೂರಾರು ಕಿಲೋಮೀಟರ್ ದೂರದಲ್ಲಿ ಏರ್ ಬಾಂಬುಗಳು ಅಟ್ಯಾಕ್ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸದ್ಯಕ್ಕೆ ವಿದ್ಯಾರ್ಥಿ ಮತ್ತು ಮತ್ತೋರ್ವ ವಿದ್ಯಾರ್ಥಿನಿ ಇರುವ ಕಡೆ ಯಾವುದೇ ತೊಂದರೆ ಇಲ್ಲ ಎಂದು ಮಂಗಳೂರು ಮೂಲದ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ. ಉಕ್ರೆನ್ ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಕ್ಲಾಟನ್ ಪೋಷಕರಿಗೆ ಕರೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು