2:09 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಷ್ಯಾ-ಉಕ್ರೇನ್ ಯುದ್ಧ ; ಉಕ್ರೇನ್‌ನಲ್ಲಿ ಸಿಲುಕಿರುವ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು !

24/02/2022, 18:11

ಮಂಗಳೂರು
ReporterKarnataka.com

ಮಂಗಳೂರಿ‌ನ ದೇರೇಬೈಲ್ ನಿವಾಸಿ ಅನೈನಾ ಅನ್ನ ಅವರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದು, ಉಕ್ರೇನ್‌ನ ಖಾರ್ಕಿವ್ ನಗರದ ಗಡಿ ಭಾಗದಲ್ಲಿ ‌ನೆಲೆಸಿರೋ ಅನೈನಾ ಮಂಗಳೂರಿನಲ್ಲಿರೋ ತಾಯಿ ಸಂಧ್ಯಾ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ.
ಸದ್ಯ ಉಕ್ರೇನ್‌ನಲ್ಲಿ ಸುರಕ್ಷಿತ ಸ್ಥಳದಲ್ಲಿರೋ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಉಕ್ರೇನ್‌ ನಲ್ಲಿ ಸಿಲುಕಿರುವ ಮತ್ತೋರ್ವ ಮಂಗಳೂರು ಪಡೀಲು ನಿವಾಸಿ ಕ್ಲಾಟನ್ ಅವರು ಸದ್ಯಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ.

ಜತೆಗೆ ಉಕ್ರೇನ್ ವಿದ್ಯಾರ್ಥಿ ಪೋಷಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ಸಂಪರ್ಕಿಸಿದ್ದಾರೆ. ಕ್ಲಾಟನ್ ಇರುವ ಕಡೆಯಿಂದ ನೂರಾರು ಕಿಲೋಮೀಟರ್ ದೂರದಲ್ಲಿ ಏರ್ ಬಾಂಬುಗಳು ಅಟ್ಯಾಕ್ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸದ್ಯಕ್ಕೆ ವಿದ್ಯಾರ್ಥಿ ಮತ್ತು ಮತ್ತೋರ್ವ ವಿದ್ಯಾರ್ಥಿನಿ ಇರುವ ಕಡೆ ಯಾವುದೇ ತೊಂದರೆ ಇಲ್ಲ ಎಂದು ಮಂಗಳೂರು ಮೂಲದ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ. ಉಕ್ರೆನ್ ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಕ್ಲಾಟನ್ ಪೋಷಕರಿಗೆ ಕರೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು