8:18 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಆನ್‌ಲೈನ್ ವಂಚನೆ: ಹಣ ಕಳೆದುಕೊಂಡಿದ್ದ 4 ಮಂದಿಗೆ 6,43,297 ರೂ. ಮರುಪಾವತಿ ಮಾಡಿಸಿದ ಪೊಲೀಸರು!

25/02/2022, 10:21

ಮೈಸೂರು(reporterkarnataka.com): ಆನ್ ಲೈನ್ ವಂಚನೆ ಮೂಲಕ ಹಣ ಕಳೆದುಕೊಂಡಿದ್ದ ಮತ್ತೆ ನಾಲ್ವರಿಗೆ ಪೊಲೀಸರು ಒಟ್ಟು 6,43,297 ರೂಗಳನ್ನು ವಾಪಾಸ್ ಕೊಡಿಸಿದ್ದಾರೆ.

ಮೈಸೂರಿನ ವಿಜಯನಗರದ ಚಂದ್ ಮತ್ತು ಸುನೀತಾ ಲಾಲ್ ಚಂದ್ ಎಂಬುವರಿoದ ಕೆವೈಸಿ ಆಪ್ಡೇಟ್ ಎಂದು ಒಟಿಪಿ ಪಡೆದು ಒಟ್ಟು 4,49,100 ರೂ, ವಿದ್ಯಾರಣ್ಯಪುರಂನ ಚಂದ್ರು ಎನ್ ಎಂಬುವರಿoದ ಕೆವೈಸಿ ಅಪ್ಡೇಟ್ ಮಾಡಲು ಬ್ಯಾಂಕ್ ಖಾತೆಯ ಮಾಹಿತಿ ಪಡೆದು ಒಟ್ಟು 1,69,199 ರೂ, ದಟ್ಟಗಳ್ಳಿಯ ನಿವಾಸಿ ರವಿ ಹೆಬ್ಬಾರ್‌ಗೆ ಬ್ಯಾಂಕ್‌ನವರು ಎಂದು ಹೇಳಿ ಒಟ್ಟು 22,999 ರೂ, ಹಿನಕಲ್‌ನ ಪ್ರೇಮ್ ದಾಸ್ ರಿಗೆ ಡೆಬಿಟ್ ಕಾರ್ಡ್ ಮೂಲಕ ರಿಚಾರ್ಜ್ ಎಂದು ಒಟ್ಟು 1,999 ರೂ ಹಣವನ್ನು ವಂಚಿಸಲಾಗಿತ್ತು. ಈ ಬಗ್ಗೆ ಸಿಇಎನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, 4 ಪ್ರತ್ಯೇಕ ಪ್ರಕರಣಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿನ ಆರೋಪಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದ್ದ ಒಟ್ಟು 6,43,297 ರೂ ಹಣವನ್ನು ಸೆನ್ ಕ್ರೈo ಪೊಲೀಸ್ ಠಾಣೆಯ ಕ್ವಿಕ್ ರೆಸ್ಪಾಂನ್ಸ್ ಟೀಮ್‌ನ ಸಿಬ್ಬಂದಿಗಳು ತ್ವರಿತವಾಗಿ ಕ್ರಮ ಕೈಗೊಂಡು, ಸಂಬoಧ ಪಟ್ಟ ಬ್ಯಾಂಕ್ ಮ್ಯಾನೇಜರ್, ನೋಡಲ್ ಆಫೀಸರ್, ಮತ್ತು ಕೋರ್ ಬ್ಯಾಂಕಿoಗ್‌ನ ಲೀಗಲ್ ಟೀಮ್ ರವರನ್ನು ಸಂಪರ್ಕಿಸಿ ಆರೋಪಿಗಳ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಿಸಿ, ಆರೋಪಿಗಳ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಹಣ ಕಳೆದುಕೊಂಡವರಿಗೆ ಹಿಂದಿರುಗಿಸಿದ್ದಾರೆ

ಈ ಕಾರ್ಯವನ್ನು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ, ಮಾರ್ಗದರ್ಶನದಲ್ಲಿ ಮೈಸೂರು ನಗರ ಸೆನ್ ಕ್ರೈo ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯಕುಮಾರ್.ಎನ್, ಪಿ.ಎಸ್.ಐ.ಗಳಾದ ಅನಿಲ್‌ಕುಮಾರ್, ಸಿದ್ದೇಶ್ ಎಂ.ಎಲ್. ಮತ್ತು ಸಿಬ್ಬಂದಿಗಳು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು