5:33 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಆನ್‌ಲೈನ್ ವಂಚನೆ: ಹಣ ಕಳೆದುಕೊಂಡಿದ್ದ 4 ಮಂದಿಗೆ 6,43,297 ರೂ. ಮರುಪಾವತಿ ಮಾಡಿಸಿದ ಪೊಲೀಸರು!

25/02/2022, 10:21

ಮೈಸೂರು(reporterkarnataka.com): ಆನ್ ಲೈನ್ ವಂಚನೆ ಮೂಲಕ ಹಣ ಕಳೆದುಕೊಂಡಿದ್ದ ಮತ್ತೆ ನಾಲ್ವರಿಗೆ ಪೊಲೀಸರು ಒಟ್ಟು 6,43,297 ರೂಗಳನ್ನು ವಾಪಾಸ್ ಕೊಡಿಸಿದ್ದಾರೆ.

ಮೈಸೂರಿನ ವಿಜಯನಗರದ ಚಂದ್ ಮತ್ತು ಸುನೀತಾ ಲಾಲ್ ಚಂದ್ ಎಂಬುವರಿoದ ಕೆವೈಸಿ ಆಪ್ಡೇಟ್ ಎಂದು ಒಟಿಪಿ ಪಡೆದು ಒಟ್ಟು 4,49,100 ರೂ, ವಿದ್ಯಾರಣ್ಯಪುರಂನ ಚಂದ್ರು ಎನ್ ಎಂಬುವರಿoದ ಕೆವೈಸಿ ಅಪ್ಡೇಟ್ ಮಾಡಲು ಬ್ಯಾಂಕ್ ಖಾತೆಯ ಮಾಹಿತಿ ಪಡೆದು ಒಟ್ಟು 1,69,199 ರೂ, ದಟ್ಟಗಳ್ಳಿಯ ನಿವಾಸಿ ರವಿ ಹೆಬ್ಬಾರ್‌ಗೆ ಬ್ಯಾಂಕ್‌ನವರು ಎಂದು ಹೇಳಿ ಒಟ್ಟು 22,999 ರೂ, ಹಿನಕಲ್‌ನ ಪ್ರೇಮ್ ದಾಸ್ ರಿಗೆ ಡೆಬಿಟ್ ಕಾರ್ಡ್ ಮೂಲಕ ರಿಚಾರ್ಜ್ ಎಂದು ಒಟ್ಟು 1,999 ರೂ ಹಣವನ್ನು ವಂಚಿಸಲಾಗಿತ್ತು. ಈ ಬಗ್ಗೆ ಸಿಇಎನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, 4 ಪ್ರತ್ಯೇಕ ಪ್ರಕರಣಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿನ ಆರೋಪಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದ್ದ ಒಟ್ಟು 6,43,297 ರೂ ಹಣವನ್ನು ಸೆನ್ ಕ್ರೈo ಪೊಲೀಸ್ ಠಾಣೆಯ ಕ್ವಿಕ್ ರೆಸ್ಪಾಂನ್ಸ್ ಟೀಮ್‌ನ ಸಿಬ್ಬಂದಿಗಳು ತ್ವರಿತವಾಗಿ ಕ್ರಮ ಕೈಗೊಂಡು, ಸಂಬoಧ ಪಟ್ಟ ಬ್ಯಾಂಕ್ ಮ್ಯಾನೇಜರ್, ನೋಡಲ್ ಆಫೀಸರ್, ಮತ್ತು ಕೋರ್ ಬ್ಯಾಂಕಿoಗ್‌ನ ಲೀಗಲ್ ಟೀಮ್ ರವರನ್ನು ಸಂಪರ್ಕಿಸಿ ಆರೋಪಿಗಳ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಿಸಿ, ಆರೋಪಿಗಳ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಹಣ ಕಳೆದುಕೊಂಡವರಿಗೆ ಹಿಂದಿರುಗಿಸಿದ್ದಾರೆ

ಈ ಕಾರ್ಯವನ್ನು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ, ಮಾರ್ಗದರ್ಶನದಲ್ಲಿ ಮೈಸೂರು ನಗರ ಸೆನ್ ಕ್ರೈo ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯಕುಮಾರ್.ಎನ್, ಪಿ.ಎಸ್.ಐ.ಗಳಾದ ಅನಿಲ್‌ಕುಮಾರ್, ಸಿದ್ದೇಶ್ ಎಂ.ಎಲ್. ಮತ್ತು ಸಿಬ್ಬಂದಿಗಳು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು