11:30 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಗಡ್ಕಕರಿ ಭೇಟಿ ವೇಳೆ ಸುರತ್ಕಲ್ ಟೋಲ್ ಸಮಸ್ಯೆ ಇತ್ಯರ್ಥಪಡಿಸಿ: ಸಂಸದ ನಳಿನ್ ಗೆ ಹೋರಾಟ ಸಮಿತಿ ಹಕ್ಕೊತ್ತಾಯ

26/02/2022, 11:06

ಮಂಗಳೂರು(reporterkarnataka.com): ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಂಗಳೂರು ಭೇಟಿಯ ಸಂದರ್ಭ ಸುರತ್ಕಲ್ ತಾತ್ಕಾಲಿಕ  ಟೋಲ್ ಗೇಟ್ ತೆರವು ಕುರಿತು ಸಭೆ ಏರ್ಪಡಿಸಿ ಸಮಸ್ಯೆ ಇತ್ಯರ್ಥ ಪಡಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಮಾತು ಉಳಿಸಿಕೊಳ್ಳುವಂತೆ ಹೋರಾಟ ಸಮಿತಿ ಆಗ್ರಹಿಸಿದೆ.

2019ರ ಡಿಸೆಂಬರ್ ತಿಂಗಳಲ್ಲಿ‌ ಫಾಸ್ಟ್ ಟ್ಯಾಗ್ ಕಡ್ಡಾಯ ಸಂದರ್ಭ ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ನಲ್ಲಿಯೂ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಸ್ಥಳೀಯ ವಾಹನಗಳ ಉಚಿತ ಪ್ರಯಾಣ ರದ್ದುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿತ್ತು. ಆ ಸಂದರ್ಭ ಟೋಟ್ ಗೇಟ್ ವಿರೋಧಿ ಹೋರಾಟ ಸಮಿತಿ ತೀವ್ರ ವಿರೋಧ ವ್ಯಕ್ತ ಪಡಿಸಿತ್ತು. ಇದು ಜಿಲ್ಲಾಡಳಿತ ಹಾಗೂ ಸಾರ್ವಜನಿಕರ ನಡುವೆ ತಿಕ್ಕಾಟಕ್ಕೂ ಕಾರಣವಾಗಿತ್ತು. ಆ ಸಂದರ್ಭ ಸಂಸತ್ ಅಧಿವೇಶನದ ಪ್ರಯುಕ್ತ ದೆಹಲಿಯಲ್ಲಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯದ ಕೆಲವು ಸಂಸದರ ನಿಯೋಗದೊಂದಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿದ್ದರು. ಸಚಿವ ನಿತಿನ್ ಗಡ್ಕರಿ ಸುರತ್ಕಲ್ ಟೋಲ್ ಗೇಟ್ ತೆರವು ಸಂಬಂಧ ವಿಶೇಷ ಸಭೆ ನಡೆಸಲು ಪ್ರಾಧಿಕಾರ, ಹಾಗೂ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೆಲವೇ ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ತೆರವುಗೊಳ್ಳಲಿದೆ ಎಂದು ಮಾಧ್ಯಮಗಳಿಗೆ ಮಾಹಿತಿಯನ್ನೂ ನೀಡಿದ್ದರು. ಇದು ಜಿಲ್ಲೆಯ ಪತ್ರಿಕೆಗಳಲ್ಲಿ  ವರದಿಯೂ ಆಗಿತ್ತು. ಈ ಪ್ರಯತ್ನಕ್ಕಾಗಿ ಕೆನರಾ ಬಸ್ಸು ಮಾಲಕರ ಸಂಘದವರು ಪತ್ರಿಕೆಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆ ಸಲ್ಲಿಸಿ‌ ಜಾಹೀರಾತನ್ನೂ ನೀಡಿದ್ದರು. ಆದರೆ ನಿತಿನ್ ಗಡ್ಕರಿಯವರು ಸಭೆ ನಡೆಸಿ ಟೋಲ್ ಗೇಟ್ ಸಮಸ್ಯೆ ಇತ್ಯರ್ಥ ಪಡಿಸಲಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿ ಈಗ ಎರಡು ವರ್ಷ ಸಂದಿದೆ. ಈ ನಡುವೆ ಮೂರು ಬಾರಿ ಟೋಲ್ ಸಂಗ್ರಹ ಗುತ್ತಿಗೆ ನವೀಕರಣಗೊಂಡಿದೆ. ಆದರೆ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರಕ್ಕೆ ಸಂಬಂಧಿಸಿ ಈವರಗೆ ವಿಶೇಷ ಸಭೆಯಾಗಲಿ, ಸಾಮಾನ್ಯ ಸಭೆಯಾಗಲಿ ನಡೆದಿಲ್ಲ. ಬದಲಿಗೆ ಟೋಲ್ ದರವನ್ನು ಏರಿಸಿ ಪ್ರಯಾಣಿಕರ ಸುಲಿಗೆಯನ್ನು ಹೆಚ್ಚಿಸಲಾಗಿದೆ. ಸುರತ್ಕಲ್ ಟೋಲ್ ಗೇಟ್ ಅಧಿಕೃತ ಎಂದು ಫಲಕವನ್ನೂ ಅಳವಡಿಸಲಾಗಿದೆ. ಇದು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ‌ ಸಚಿವ ನಿತಿನ್ ಗಡ್ಕರಿ ವಿಶ್ವಾಸಾರ್ಹತೆಯನ್ನೆ ಪ್ರಶ್ನಾರ್ಹಗೊಳಿಸಿದೆ.

ಈಗ ಸ್ವತಹ ನಿತಿನ್ ಗಡ್ಕರಿ ಜಿಲ್ಲೆಯ ರಾಷ್ಟ್ರಿಯ ಹೆದ್ದಾರಿಗಳ ಕಾಮಗಾರಿಗಳಿಗೆ ಸಂಬಂಧಿಸಿ ಫೆಬ್ರವರಿ 28  ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಇದೇ ಸಂದರ್ಭ ಅಂದು‌ ಮಾತು ಕೊಟ್ಟಂತೆ ಸುರತ್ಕಲ್ ಟೋಲ್ ಕೇಂದ್ರ ತೆರವಿಗೆ ಸಂಬಂಧಿಸಿ ಸಚಿವ ಗಡ್ಕರಿಯವರ ನೇತೃತ್ವದಲ್ಲಿ‌ ಸಭೆ ನಡೆಸಿ ಈ ಕುರಿತು ಅಂತಿಮ ನಿರ್ಧಾರ ಅಗುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ನೋಡಿಕೊಳ್ಳಬೇಕು. ಆ ಮೂಲಕ ಹಲವು ವರ್ಷಗಳಿಂದ ಜನರ ಅಕ್ರಮ ಸುಲಿಗೆಯಲ್ಲಿ‌ ತೊಡಗಿರುವ ಸುರತ್ಕಲ್ ಟೋಲ್ ಕೇಂದ್ರದ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು. ಒಂದು ವೇಳೆ ಸಚಿವರು ಸಭೆ ನಡೆಸಲು‌ ಮುಂದಾಗದಿದ್ದಲ್ಲಿ‌ ಸಂಸದರು, ಸಚಿವರು ಜನತೆಗೆ ಸುಳ್ಳು ಹೇಳಿ ದಾರಿ ತಪ್ಪಿಸಿರುವುದು, ಟೋಲ್ ಮಾಫಿಯಾದೊಂದಿಗೆ ಶಾಮೀಲಾಗಿರುವುದು ಸಾಬೀತಾಗುತ್ತದೆ. ಇದು ಮುಂದಿನ ದಿನಗಳಲ್ಲಿ ಹೋರಾಟ ಗಂಭೀರ ಸ್ವರೂಪ ತಾಳಲು ಕಾರಣವಾದರೆ ಅದಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ನೇರ ಹೊಣೆಯಾಗಲಿದ್ದಾರೆ ಎಂದು ಟೋಲ್ ಗೇಟ್ ವಿರೋಧಿ  ಹೋರಾಟ ಸಮಿತಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು