1:42 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ರಸ್ತೆ ಗುಂಡಿಯಲ್ಲೂ ಹಣ ಗುಳುಂ: ಹೊಂಡ ಮುಚ್ಚದಿದ್ದರೂ ಗುತ್ತಿಗೆದಾರರ ಬಿಲ್ ಪಾಸ್ ಮಾಡುವ ಎಂಜಿನಿಯರ್ ಗಳು!

26/02/2022, 19:32

ರಂಜಿನಿ ಕುಟ್ಟಪ್ಪ ಪೊನ್ನಂಪೇಟೆ ಮಡಿಕೇರಿ

info.reporterkarnataka.com

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಿಂದ ಹಾಲೇರಿವರೆಗೆ ರಸ್ತೆಯ ಗುಂಡಿಗಳ ಮುಚ್ಚುವ ಕೆಲಸದಲ್ಲಿ ಅವ್ಯವಹಾರ ನಡೆದಿದೆ ಎಂದು ಕನ್ನಡ ರಕ್ಷಣಾ ವೇದಿಕೆ ಆರೋಪಿಸಿದರು.


ರಸ್ತೆ ಗುಂಡಿ ಮುಚ್ಚುವ ಕೆಲಸಕ್ಕೆ ಸರಕಾರದಿಂದ ಲಕ್ಷಾಂತರ ರೂ. ಬಿಡುಗಡೆಯಾಗಿದೆ. ಈ ಹಣ ಗುತ್ತಿಗೆದಾರರ ಪಾಲಾಗುತ್ತಿದೆ. ಈ ರಸ್ತೆಗಳನ್ನು ನೋಡಿಕೊಳ್ಳಲೆಂದು ಇಂಜಿನಿಯರ್ ಗಳಿಗೆ ನೇಮಿಸಿರುತ್ತಾರೆ. ಆದರೆ ಲೋಕೋಪಯೋಗಿ ಇಂಜಿನಿಯರ್ ಗಳು ಇದನ್ನೆಲ್ಲ ಮರೆತು ಗುತ್ತಿಗೆದಾರರು ಕೆಲಸ ಮಾಡದಿದ್ದರೂ  ಅವರಿಗೆ ಬಿಲ್ ಮಾಡುವ ಕೆಲಸ ನಡೆಸುತ್ತಿದ್ದಾರೆ. ಸರಿಯಾಗಿ ಗುಂಡಿ ಮುಚ್ಚುವ ಕೆಲಸ ಎಲ್ಲೂ ಆಗಿಲ್ಲ. ಹಾಗಾಗಿ ಇವರ ಮೇಲೆ ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮತ್ತು ಕೊಡಗು ಲೋಕೋಪಯೋಗಿ ಇಲಾಖೆಗೆ ಪತ್ರಿಕೆ ಮುಖಾಂತರ ಮನವಿ ಮಾಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಲೋಕಾಯುಕ್ತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ದೂರು ಕೊಡಲು ಕರವೇ ಕಾರ್ಯಕರ್ತರು ಸಿದ್ಧಗೊಳ್ಳುತ್ತಿದ್ದಾರೆ ಎಂದು  ಕರವೇ ಅಧ್ಯಕ್ಷರು ಫ್ರಾನ್ಸಿಸ್ ಡಿಸೋಜ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು