11:19 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪ್ರತಿ ಹಳ್ಳಿಯಲ್ಲೂ ಆರೋಗ್ಯ ಮೂಲ ಸೌಕರ್ಯ ವೃದ್ಧಿಗೆ ಸರಕಾರದ ಗಮನ: ಪ್ರಧಾನಿ ಮೋದಿ ಘೋಷಣೆ

26/02/2022, 20:20

ಹೊಸದಿಲ್ಲಿ(reporterkarnataka.com): ಆಧುನಿಕ ಮತ್ತು ಭವಿಷ್ಯ ತಂತ್ರಜ್ಞಾನದದೊಂದಿಗೆ ಆರೋಗ್ಯದ ಜೊತೆ ಪ್ರತಿಯೊಬ್ಬರ ಕ್ಷೇಮದ ಬಗ್ಗೆ ನಾವು ಗಮನ ಹರಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಅನುಷ್ಠಾನ ಮಾಡುವ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆಯೋಜಿಸಿರುವ ವೆಬಿನಾರ್‌ನ್ನು ಪ್ರಧಾನಿ ಮೋದಿ ಉದ್ಘಾಟಿಸಿ ಮಾತನಾಡಿದ್ದಾರೆ.

ಬಜೆಟ್‌ನಲ್ಲಿ ಮೂರು ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಆಧುನಿಕ ಮೂಲಸೌಕರ್ಯ, ಮಾನವ ಸಂಪನ್ಮೂಲ ವಿಸ್ತರಣೆ, ಸಂಶೋಧನೆಗೆ ಉತ್ತೇಜನ ನೀಡುವುದು ಹಾಗೂ ಆಧುನಿಕ ಮತ್ತು ಭವಿಷ್ಯದ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೊಡ್ಡ ನಗರಗಳನ್ನು ಮೀರಿ ಆರೋಗ್ಯ ಮೂಲಸೌಕರ್ಯ ವೃದ್ಧಿಸುವ ಆಶಯ ಇದೆ. ಪ್ರತಿ ಹಳ್ಳಿ, ಜಿಲ್ಲೆಯಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ನಮ್ಮ ಉದ್ದೇಶ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು