6:21 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ: ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಚಾಲನೆ

07/06/2021, 20:31

ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. 


ಕಂಕನಾಡಿ ಬಿ ವಾರ್ಡ್  ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಪರಿಸರ ಪ್ರೇಮ ನಮ್ಮ ಜವಾಬ್ದಾರಿ. ಇದನ್ನು ಉಳಿಸುವ ಕಾರ್ಯ ನಿರಂತರ ಆಗಬೇಕಿದೆ. ಇದನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿ ನಿತ್ಯವು  ಇದನ್ನು ಆಚರಿಸಬೇಕೆಂದರು.
ಗಿಡವನ್ನು ಬೆಳೆಸುವುದು ಮಾತ್ರವಲ್ಲ ಅದನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. 



ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ರೆಹನಾ ಮಾತನಾಡಿ,  ವಾತಾವರಣದಲ್ಲಿ ಇಂಗಾಲದ ಡೈ ಆಕ್ಸೈಡ್ ಕಡಿಮೆ ಮಾಡಿ ಆಮ್ಲಜನಕ ಹೆಚ್ಚಿಸುವ ಸಸಿಗಳು ನಮಗೆ ಅನಿವಾರ್ಯವಾಗಿದೆ ಎಂದು ಹೇಳಿದರು. 


ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ, ಪ್ರಕೃತಿ ನಮ್ಮ ಉಸಿರು ಪರಿಸರ ಮತ್ತು ಆರೋಗ್ಯಕರ ಬೆಳವಣಿಗೆಗೆ ಮನುಕುಲದ ಉಳಿವಿಗಾಗಿ ನಮ್ಮ ನಿರಂತರ ಪ್ರಯತ್ನ ಆಗಬೇಕಾಗಿದೆ ಎಂದರು. 



 ಈ ಸಂದರ್ಭದಲ್ಲಿ ಪ್ರಾಥಮಿಕ ಕೇಂದ್ರದ ಸುತ್ತಮುತ್ತ ನೆರೆ ಮನೆಯವರಿಂದ  ಗಿಡ ನೆಡಿಸಲಾಯಿತು. ಕೊರೊನಾ ವಾರಿಯರ್ಸ್ ಗಳನ್ನು  ಗೌರವಿಸಲಾಯಿತು. ಕೋವಿಡ್ ನೋಡಲ್ ಅಧಿಕಾರಿ ಡಾ.ಸೇಸಪ್ಪ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಕೇಂದ್ರದ ಸಿಬ್ಬಂದಿ ವರ್ಗ ಹಾಗೂ ಪಾಲಿಕೆಯ ಮಲೇರಿಯ ತಪಾಸಣಾ ಸಿಬ್ಬಂದಿಗಳು  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು