6:03 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಎಟಿಎಂ ಕಳವು ಯತ್ನ: ಜನರಿಂದ ತಪ್ಪಿಸಿಕೊಂಡು ಓಡಲೆತ್ನಿಸಿದ ಕಳ್ಳರು ಮಾಡಿದ್ದೇನು? ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ?

28/02/2022, 15:34

ದೊಡ್ಡಬಳ್ಳಾಪುರ(reporterkarnataka.com): ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅಡ್ಡಹಾಕಿದ ಕಳ್ಳರು ಡ್ರಾಪ್ ಕೇಳಿದ್ರು.

ಕಾರು ನಿಲ್ಲುತ್ತಿದ್ದಂತೆ ಅದರೊಳಗೆ ಹತ್ತಿ ಅಬ್ಬಾ ಬಚಾವಾದೆವು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಆ ಕಾರು ನೇರವಾಗಿ ಪೊಲೀಸ್​ ಠಾಣೆ ಮುಂದೆ ನಿಲ್ಲುತ್ತೆ. ಅರೇ ಇದ್ಹೇನಿದು..? ಎಂದು ಕಳ್ಳರು ಪಿಳಿಪಿಳಿ ಕಣ್ಣುಬಿಟ್ಟು ನೋಡುವಷ್ಟರಲ್ಲಿ ಗೊತ್ತಾಗುತ್ತೇ ತಾವು ಡ್ರಾಪ್​ ಕೇಳಿದ್ದು ಪೊಲೀಸರನ್ನೇ..!

ಇದು ಯಾವ ಸಿನಿಮಾ ಕಥೆಯೂ ಅಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮೇಳೆಕೋಟೆಯೊಂದರ ಎಟಿಎಂ ಕೇಂದ್ರದಲ್ಲಿ ಶನಿವಾರ ದರೋಡೆ ಪ್ರಯತ್ನ ನಡೆಸಿದ ಕಳ್ಳರಿಬ್ಬರ ರಿಯಲ್ ಕಥೆ.

ಪ್ರಕರಣ ಸಂಬಂಧ ನೆಲಮಂಗಲ ತಾಲೂಕು ಅರಿಶಿನಕುಂಟೆ ನಿವಾಸಿಗಳಾದ ಸಚಿನ್ ಹಾಗೂ ಗಗನ್ ಎಂಬುವರನ್ನು ಬಂಧಿಸಿರುವ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೇಳೆಕೋಟೆ ಎಂಟಿಬಿ ಕೇಂದ್ರ ದರೋಡೆಗೆ ಯತ್ನಿಸಿದ ಕಳ್ಳರಿಬ್ಬರು ಜನರಿಂದ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದರು. ಇದೇ ವೇಳೆ ಮಾಹಿತಿ ಪಡೆದ ಪೊಲೀಸರು ಖಾಸಗಿ ಕಾರಿನಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಈ ಬಗ್ಗೆ ಅರಿವೇ ಇಲ್ಲದ ಕಳ್ಳರು ಜನರಿಂದ ತಪ್ಪಿಸಿಕೊಳ್ಳಲು ಪೊಲೀಸರಿದ್ದ ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ್ದರು. ಕಳ್ಳರನ್ನು ಹಿಡಿಯಲು ಬಂದ ಪೊಲೀಸರಿಗೆ ತುಪ್ಪ ಜಾರಿ ರೊಟ್ಟಿಗೆ ಬಿದ್ದಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು