5:57 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಎಟಿಎಂ ಕಳವು ಯತ್ನ: ಜನರಿಂದ ತಪ್ಪಿಸಿಕೊಂಡು ಓಡಲೆತ್ನಿಸಿದ ಕಳ್ಳರು ಮಾಡಿದ್ದೇನು? ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ?

28/02/2022, 15:34

ದೊಡ್ಡಬಳ್ಳಾಪುರ(reporterkarnataka.com): ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅಡ್ಡಹಾಕಿದ ಕಳ್ಳರು ಡ್ರಾಪ್ ಕೇಳಿದ್ರು.

ಕಾರು ನಿಲ್ಲುತ್ತಿದ್ದಂತೆ ಅದರೊಳಗೆ ಹತ್ತಿ ಅಬ್ಬಾ ಬಚಾವಾದೆವು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಆ ಕಾರು ನೇರವಾಗಿ ಪೊಲೀಸ್​ ಠಾಣೆ ಮುಂದೆ ನಿಲ್ಲುತ್ತೆ. ಅರೇ ಇದ್ಹೇನಿದು..? ಎಂದು ಕಳ್ಳರು ಪಿಳಿಪಿಳಿ ಕಣ್ಣುಬಿಟ್ಟು ನೋಡುವಷ್ಟರಲ್ಲಿ ಗೊತ್ತಾಗುತ್ತೇ ತಾವು ಡ್ರಾಪ್​ ಕೇಳಿದ್ದು ಪೊಲೀಸರನ್ನೇ..!

ಇದು ಯಾವ ಸಿನಿಮಾ ಕಥೆಯೂ ಅಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮೇಳೆಕೋಟೆಯೊಂದರ ಎಟಿಎಂ ಕೇಂದ್ರದಲ್ಲಿ ಶನಿವಾರ ದರೋಡೆ ಪ್ರಯತ್ನ ನಡೆಸಿದ ಕಳ್ಳರಿಬ್ಬರ ರಿಯಲ್ ಕಥೆ.

ಪ್ರಕರಣ ಸಂಬಂಧ ನೆಲಮಂಗಲ ತಾಲೂಕು ಅರಿಶಿನಕುಂಟೆ ನಿವಾಸಿಗಳಾದ ಸಚಿನ್ ಹಾಗೂ ಗಗನ್ ಎಂಬುವರನ್ನು ಬಂಧಿಸಿರುವ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೇಳೆಕೋಟೆ ಎಂಟಿಬಿ ಕೇಂದ್ರ ದರೋಡೆಗೆ ಯತ್ನಿಸಿದ ಕಳ್ಳರಿಬ್ಬರು ಜನರಿಂದ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದರು. ಇದೇ ವೇಳೆ ಮಾಹಿತಿ ಪಡೆದ ಪೊಲೀಸರು ಖಾಸಗಿ ಕಾರಿನಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಈ ಬಗ್ಗೆ ಅರಿವೇ ಇಲ್ಲದ ಕಳ್ಳರು ಜನರಿಂದ ತಪ್ಪಿಸಿಕೊಳ್ಳಲು ಪೊಲೀಸರಿದ್ದ ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ್ದರು. ಕಳ್ಳರನ್ನು ಹಿಡಿಯಲು ಬಂದ ಪೊಲೀಸರಿಗೆ ತುಪ್ಪ ಜಾರಿ ರೊಟ್ಟಿಗೆ ಬಿದ್ದಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು