6:41 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮಾರ್ಚ್ 4: ರಾಜ್ಯಾದ್ಯಂತ ಅನುದಾನಿತ ಶಾಲಾ-ಕಾಲೇಜುಗಳು ಬಂದ್; ಏನಿವರ ಬೇಡಿಕೆ?

28/02/2022, 18:27

ಬೆಂಗಳೂರು:(reporterkarnataka.com): ರಾಜ್ಯದಾದ್ಯಂತ ಇರುವ ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೂ ಪಿಂಚಣಿ ಸೌಲಭ್ಯವನ್ನು 
ಒದಗಿಸುವಂತೆ ಒತ್ತಾಯಿಸಿ ಮಾರ್ಚ್ 4ರಂದು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು.
ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಸಿ ಗೋಪಿನಾಥ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
2006ರ ನಂತರ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ.
ಆದರೆ 2006ಕ್ಕೂ ಮೊದಲು ಹಳೆ ಪಿಂಚಣಿ ವ್ಯವಸ್ಥೆಯೇ ಜಾರಿಯಲ್ಲಿತ್ತು. ನೂತನ ಪಿಂಚಣಿ ಯೋಜನೆ ರದ್ದುಪಡಿಸುವಂತೆ ಕೋರಿದರೂ ಸರ್ಕಾರ ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದರು.
ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಪಿಂಚಣಿ ಯೋಜನೆ ಸೌಲಭ್ಯವಿಲ್ಲ. ಜ್ಯೋತಿ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಬೇಕು. ಅಲ್ಲದೇ ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿರುವಂತ ಸೌಲಭ್ಯವನ್ನು ಅನುದಾನಿತ ಶಾಲೆಗಳಿಗೂ ನೀಡುವಂತೆ ಒತ್ತಾಯಿಸಿ ಮಾರ್ಚ್ 4ರಂದು ರಾಜ್ಯಾಧ್ಯಂತ ಶಾಲಾ-ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು