2:38 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಕಠಿಣ ಪರಿಶ್ರಮ ಮತ್ತು ಆತ್ಮ ವಿಶ್ವಾಸದಿಂದ ಸಿಎ ಪದವಿಯನ್ನು ಪಡೆದ ಕೆನರಾ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಗೆ ಸನ್ಮಾನ

28/02/2022, 22:10

ಮಂಗಳೂರು(reporterkarnataka.com); ಡಿಸೆಂಬರ್ 2021ನೇ ವರ್ಷದಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆನರಾ ಸಂಧ್ಯಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಗೋಕುಲ್ ಪೈ, ಪೂರ್ಣಿಮಾ ರಾವ್ ಹಾಗೂ ಸಂಜನಾ ಪೈ ಅವರಿಗೆ  ಸನ್ಮಾನ ಮಾಡಲಾಯಿತು.

“ನಾವು ನಿಷ್ಠಾವಂತರು ಮತ್ತು ಶ್ರಮದಾಯಕರಾಗಿದ್ದರೆ  ಏನನ್ನೂ ಸಾಧಿಸಬಹುದು. ನಮ್ಮಲ್ಲಿ ಆತ್ಮವಿಶ್ವಾಸ , ದೇವರಲ್ಲಿ ನಂಬಿಕೆ ಮತ್ತು ಭಕ್ತಿ ಇದ್ದರೆ ಯಾವ ಎತ್ತರಕ್ಕಾದರೂ ನಾವು ತಲುಪಬಹುದು. ಮೊದಲಾಗಿ ನಮ್ಮ ಜೀವನದಲ್ಲಿ ಶಿಸ್ತನ್ನು ಅಳವಡಿಸಬೇಕು ಮತ್ತು ನಾವು ಮಾಡುವ ಕಾರ್ಯದಲ್ಲಿ ನಂಬಿಕೆ ಇರುವುದು ಮುಖ್ಯ” ಎಂದು ಕಾಲೇಜಿನ ಸಂಚಾಲಕ  ಸಿಎ ಜಗನ್ನಾಥ ಕಾಮತ್ ನುಡಿದರು.


ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಗುಟ್ಟನ್ನು ಎಲ್ಲಾ ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.

ಕಾಲೇಜಿನ ವಿದ್ಯಾರ್ಥಿನಿ ಸಹನಾ ಪ್ರಾರ್ಥನೆಗೈದರು, ಕಾಲೇಜಿನ ಪ್ರಾಂಶುಪಾಲರಾದ  ಪ್ರೊ. ಅನಿಲಾ ಕಾಮತ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಾವ್ಯಶ್ರೀ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸ್ಮಿತಾ ಎಂ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು