10:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಠಿಣ ಪರಿಶ್ರಮ ಮತ್ತು ಆತ್ಮ ವಿಶ್ವಾಸದಿಂದ ಸಿಎ ಪದವಿಯನ್ನು ಪಡೆದ ಕೆನರಾ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಗೆ ಸನ್ಮಾನ

28/02/2022, 22:10

ಮಂಗಳೂರು(reporterkarnataka.com); ಡಿಸೆಂಬರ್ 2021ನೇ ವರ್ಷದಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆನರಾ ಸಂಧ್ಯಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಗೋಕುಲ್ ಪೈ, ಪೂರ್ಣಿಮಾ ರಾವ್ ಹಾಗೂ ಸಂಜನಾ ಪೈ ಅವರಿಗೆ  ಸನ್ಮಾನ ಮಾಡಲಾಯಿತು.

“ನಾವು ನಿಷ್ಠಾವಂತರು ಮತ್ತು ಶ್ರಮದಾಯಕರಾಗಿದ್ದರೆ  ಏನನ್ನೂ ಸಾಧಿಸಬಹುದು. ನಮ್ಮಲ್ಲಿ ಆತ್ಮವಿಶ್ವಾಸ , ದೇವರಲ್ಲಿ ನಂಬಿಕೆ ಮತ್ತು ಭಕ್ತಿ ಇದ್ದರೆ ಯಾವ ಎತ್ತರಕ್ಕಾದರೂ ನಾವು ತಲುಪಬಹುದು. ಮೊದಲಾಗಿ ನಮ್ಮ ಜೀವನದಲ್ಲಿ ಶಿಸ್ತನ್ನು ಅಳವಡಿಸಬೇಕು ಮತ್ತು ನಾವು ಮಾಡುವ ಕಾರ್ಯದಲ್ಲಿ ನಂಬಿಕೆ ಇರುವುದು ಮುಖ್ಯ” ಎಂದು ಕಾಲೇಜಿನ ಸಂಚಾಲಕ  ಸಿಎ ಜಗನ್ನಾಥ ಕಾಮತ್ ನುಡಿದರು.


ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಗುಟ್ಟನ್ನು ಎಲ್ಲಾ ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.

ಕಾಲೇಜಿನ ವಿದ್ಯಾರ್ಥಿನಿ ಸಹನಾ ಪ್ರಾರ್ಥನೆಗೈದರು, ಕಾಲೇಜಿನ ಪ್ರಾಂಶುಪಾಲರಾದ  ಪ್ರೊ. ಅನಿಲಾ ಕಾಮತ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಾವ್ಯಶ್ರೀ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸ್ಮಿತಾ ಎಂ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು