3:07 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Good News: ಮಂಗಳೂರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ನಾಳೆ ಬೃಹತ್ ಉದ್ಯೋಗ ಮೇಳ

02/03/2022, 10:15

ಮಂಗಳೂರು(reporterkarnataka.com):

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ  ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಟ್ಟಾರ – ಕೂಳೂರು ಪ್ರಮುಖ ರಸ್ತೆಯಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದ ಮುಂಭಾಗದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ‌ “ಬೃಹತ್ ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ‌ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಸಿನೋಪ್ ಟೆಕ್, ಹೆಚ್.ಜಿ.ಎಸ್, ಬಿ.ಓ.ಎಸ್.ಸಿ.ಹೆಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟರ್, ಎನ್.ಟಿ.ಟಿ.ಎಫ್ ಸೇರಿದಂತೆ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.

ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೋಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಓರ್ವ ಅಭ್ಯರ್ಥಿಗೆ ಗರಿಷ್ಠವೆಂದರೆ 3 ಕಂಪನಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ವಿದ್ಯಾರ್ಹತೆಗೆ ಸರಿಹೊಂದುವ 3 ಕಂಪನಿಗಳನ್ನು ಆಯ್ಕೆಮಾಡಿ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ‌ ಶ್ರೀ ಅಶ್ವತ್ ನಾರಾಯಣ್ ಅವರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಾರ್ಯಕ್ರಮದ ಸದಾವಕಾಶ ಪಡೆದುಕೊಳ್ಳಿ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು 

 www.skillconnet.kaushalkar.com ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ವೇದವ್ಯಾಸ್ ಕಾಮತ್ ಅವರ ಶಾಸಕರ ಕಚೇರಿಗೆ ಭೇಟಿ ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು