10:29 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಉಡುಪಿ: ಬಸ್-ಸ್ಕೂಟರ್ ಮಧ್ಯೆ ಭೀಕರ ಅಪಘಾತ; ತಂದೆ- ಮಗಳು ದಾರುಣ ಸಾವು

02/03/2022, 15:46

ಉಡುಪಿ(reporterkarnataka.com): ಬಸ್ ಮತ್ತು ಸ್ಕೂಟರ್‌ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗಳು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಸಂತೆಕಟ್ಟೆ ಜಂಕ್ಷನ್‌ ನಲ್ಲಿ ನಡೆದಿದೆ.

ಮೃತರನ್ನು ಗರಡಿಮಜಲು ನಿವಾಸಿಗಳಾದ ಗಣೇಶ್‌ ಪೈ(58) ಮತ್ತು ಅವರ ಪುತ್ರಿ ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಗಣೇಶ್ ಅವರು ಹುಬ್ಬಳಿಯಿಂದ ಆಗಮಿಸಿದ್ದ ತನ್ನ ಮಗಳು ಗಾಯತ್ರಿ ಪೈ ಅವರನ್ನು ಕರೆದುಕೊಂಡು ಹೋಗಲು ಸ್ಕೂಟರ್‌ ನಲ್ಲಿ ಬಂದಿದ್ದರು. ಆಕೆಯನ್ನು ಕರೆದುಕೊಂಡು ಸಂತೆಕಟ್ಟೆ ಜಂಕ್ಷನ್‌ ಬಳಿ ರಸ್ತೆ ದಾಟುತ್ತಿದ್ದಾಗ ಕೇರಳದಿಂದ ಕೊಲ್ಲೂರು ಕಡೆಗೆ ಸಾಗುತ್ತಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸ್ಕೂಟರ್ ಗೆಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗಾಯತ್ರಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಣೇಶ್‌ ಪೈ ಅವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಉಡುಪಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಣೇಶ್‌ ಪೈ ಕರಾವಳಿ ಕಾವಲು ಪಡೆಯಲ್ಲಿ ಎ ಎಸೈ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು