2:07 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ

03/03/2022, 12:03

ಹೊಸದಿಲ್ಲಿ(reporterkarnataka.com):

ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್ತಾರ ಅರಿಂದಾಮ್ ಬಾಗ್ಚಿ, ಉಕ್ರೇನ್ನಿಂದ ಸುಮಾರು 17,000 ಭಾರತೀಯರು ಗಡಿಗಳನ್ನು ತೊರೆದಿದ್ದಾರೆ ಎಂದು ಅಂದಾಜಿಸಲಾಗಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ಉಕ್ರೇನ್ ನಿಂದ 15 ವಿಮಾನಗಳು ಭಾರತದತ್ತ ಬರಲಿದ್ದು, ಈಗಾಗಲೇ ಕೆಲವು ಮಾರ್ಗಮಧ್ಯದಲ್ಲಿವೆ ಎಂದು ಮಾಹಿತಿ ನೀಡಿದರು.

ಕಳೆದ 24 ಗಂಟೆಗಳಲ್ಲಿ 6 ವಿಮಾನಗಳು ಸ್ವದೇಶಕ್ಕೆ ಬಂದಿಳಿದೆ.ಇಲ್ಲಿಯವರೆಗೆ 3,352 ಭಾರತೀಯರನ್ನು ಉಕ್ರೇನ್ ನಿಂದ ಸ್ಥಳಾಂತರಿಸಲಾಗಿದೆ ಎಂದರು.

ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ ಭಾರತೀಯ ವಾಯುಪಡೆಯ ವಿಮಾನಗಳು ತಮ್ಮ ಸೇವೆ ನೀಡುತ್ತಿದ್ದು, ಬುಚಾರೆಸ್ಟ್ (ರೊಮೇನಿಯಾ) ನಿಂದ ಮೊದಲ ಸಿ-17 ವಿಮಾನ ಈಗಾಗಲೇ ಹೊರಟಿವೆ. ಇಂದು ರಾತ್ರಿ ದೆಹಲಿಗೆ ತಲುಪುವ ನಿರೀಕ್ಷೆಯಿದೆ.

ಇದಲ್ಲದೇ ಬುಡಾಪೆಸ್ಟ್ (ಹಂಗೇರಿ), ಬುಚಾರೆಸ್ಟ್ (ರೊಮೇನಿಯಾ) ಮತ್ತು ರ್ಜೆಸ್ಜೋವ್ (ಪೋಲೆಂಡ್) ಅರಿಂದಾಮ್ ಬಾಗ್ಚಿ ನಿಂದಲೂ ಇನ್ನೂ 3 ಐಎಎಫ್ ವಿಮಾನಗಳು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು ಹೊರಟಿವೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು