3:02 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ

03/03/2022, 12:03

ಹೊಸದಿಲ್ಲಿ(reporterkarnataka.com):

ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್ತಾರ ಅರಿಂದಾಮ್ ಬಾಗ್ಚಿ, ಉಕ್ರೇನ್ನಿಂದ ಸುಮಾರು 17,000 ಭಾರತೀಯರು ಗಡಿಗಳನ್ನು ತೊರೆದಿದ್ದಾರೆ ಎಂದು ಅಂದಾಜಿಸಲಾಗಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ಉಕ್ರೇನ್ ನಿಂದ 15 ವಿಮಾನಗಳು ಭಾರತದತ್ತ ಬರಲಿದ್ದು, ಈಗಾಗಲೇ ಕೆಲವು ಮಾರ್ಗಮಧ್ಯದಲ್ಲಿವೆ ಎಂದು ಮಾಹಿತಿ ನೀಡಿದರು.

ಕಳೆದ 24 ಗಂಟೆಗಳಲ್ಲಿ 6 ವಿಮಾನಗಳು ಸ್ವದೇಶಕ್ಕೆ ಬಂದಿಳಿದೆ.ಇಲ್ಲಿಯವರೆಗೆ 3,352 ಭಾರತೀಯರನ್ನು ಉಕ್ರೇನ್ ನಿಂದ ಸ್ಥಳಾಂತರಿಸಲಾಗಿದೆ ಎಂದರು.

ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ ಭಾರತೀಯ ವಾಯುಪಡೆಯ ವಿಮಾನಗಳು ತಮ್ಮ ಸೇವೆ ನೀಡುತ್ತಿದ್ದು, ಬುಚಾರೆಸ್ಟ್ (ರೊಮೇನಿಯಾ) ನಿಂದ ಮೊದಲ ಸಿ-17 ವಿಮಾನ ಈಗಾಗಲೇ ಹೊರಟಿವೆ. ಇಂದು ರಾತ್ರಿ ದೆಹಲಿಗೆ ತಲುಪುವ ನಿರೀಕ್ಷೆಯಿದೆ.

ಇದಲ್ಲದೇ ಬುಡಾಪೆಸ್ಟ್ (ಹಂಗೇರಿ), ಬುಚಾರೆಸ್ಟ್ (ರೊಮೇನಿಯಾ) ಮತ್ತು ರ್ಜೆಸ್ಜೋವ್ (ಪೋಲೆಂಡ್) ಅರಿಂದಾಮ್ ಬಾಗ್ಚಿ ನಿಂದಲೂ ಇನ್ನೂ 3 ಐಎಎಫ್ ವಿಮಾನಗಳು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು ಹೊರಟಿವೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು