6:11 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ

03/03/2022, 12:03

ಹೊಸದಿಲ್ಲಿ(reporterkarnataka.com):

ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್ತಾರ ಅರಿಂದಾಮ್ ಬಾಗ್ಚಿ, ಉಕ್ರೇನ್ನಿಂದ ಸುಮಾರು 17,000 ಭಾರತೀಯರು ಗಡಿಗಳನ್ನು ತೊರೆದಿದ್ದಾರೆ ಎಂದು ಅಂದಾಜಿಸಲಾಗಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ಉಕ್ರೇನ್ ನಿಂದ 15 ವಿಮಾನಗಳು ಭಾರತದತ್ತ ಬರಲಿದ್ದು, ಈಗಾಗಲೇ ಕೆಲವು ಮಾರ್ಗಮಧ್ಯದಲ್ಲಿವೆ ಎಂದು ಮಾಹಿತಿ ನೀಡಿದರು.

ಕಳೆದ 24 ಗಂಟೆಗಳಲ್ಲಿ 6 ವಿಮಾನಗಳು ಸ್ವದೇಶಕ್ಕೆ ಬಂದಿಳಿದೆ.ಇಲ್ಲಿಯವರೆಗೆ 3,352 ಭಾರತೀಯರನ್ನು ಉಕ್ರೇನ್ ನಿಂದ ಸ್ಥಳಾಂತರಿಸಲಾಗಿದೆ ಎಂದರು.

ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ ಭಾರತೀಯ ವಾಯುಪಡೆಯ ವಿಮಾನಗಳು ತಮ್ಮ ಸೇವೆ ನೀಡುತ್ತಿದ್ದು, ಬುಚಾರೆಸ್ಟ್ (ರೊಮೇನಿಯಾ) ನಿಂದ ಮೊದಲ ಸಿ-17 ವಿಮಾನ ಈಗಾಗಲೇ ಹೊರಟಿವೆ. ಇಂದು ರಾತ್ರಿ ದೆಹಲಿಗೆ ತಲುಪುವ ನಿರೀಕ್ಷೆಯಿದೆ.

ಇದಲ್ಲದೇ ಬುಡಾಪೆಸ್ಟ್ (ಹಂಗೇರಿ), ಬುಚಾರೆಸ್ಟ್ (ರೊಮೇನಿಯಾ) ಮತ್ತು ರ್ಜೆಸ್ಜೋವ್ (ಪೋಲೆಂಡ್) ಅರಿಂದಾಮ್ ಬಾಗ್ಚಿ ನಿಂದಲೂ ಇನ್ನೂ 3 ಐಎಎಫ್ ವಿಮಾನಗಳು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು ಹೊರಟಿವೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು