2:24 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ರೈಲ್ವೆ ನಿಲ್ದಾಣದಲ್ಲಿ 16 ಕೋಟಿ ಮೌಲ್ಯದ GST ದಾಖಲೆಯಿಲ್ಲದ 32 ಕೆ.ಜಿ ಚಿನ್ನ ವಶ: ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಾಟ

03/03/2022, 13:53

ಭುವನೇಶ್ವರ(reporterkarnataka.com): ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್‍ಮೆಂಟ್ ರೈಲ್ವೇ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಂಬೈಯಿಂದ ಮಂಗಳವಾರ ರಾತ್ರಿ 11.30ರ ಸುಮಾರಿಗೆ ಭುವನೇಶ್ವರಕ್ಕೆ ಆಗಮಿಸಿದ ರೈಲಿನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದ್ದು, ಬುಧವಾರ ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ನಾಲ್ವರನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಧಿಕಾರಿಗಳ ವಶವಾದ ನಾಲ್ವರನ್ನು ಹಸ್ಮುಖಲಾಲ್ ದೀಕ್ಷಿತ್, ಮಹೇಶ್ ಭೋಮ್ಸರ್, ಸುರೇಶ್ ಸಹದೇವ್ ಖರೆ ಮತ್ತು ದೀಪಕ್ ಪಟೇಲ್ ಎಂದು ಗುರುತಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ(GST) ದಾಖಲೆಗಳನ್ನು ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಆರ್ ಪಿ  ಸ್ಪಷ್ಟಪಡಿಸಿದೆ.ನಾಲ್ವರು ವ್ಯಕ್ತಿಗಳು ಮುಂಬೈಯಿಂದ ನಾಲ್ಕು ಬ್ಯಾಗ್ ಗಳ ಜೊತೆ ಬಂದಿದ್ದರು. ಒಂದೊಂದು ಬ್ಯಾಗ್ ನಲ್ಲಿ ಸುಮಾರು 8 ಕೆ.ಜಿಯಷ್ಟು ಬಂಗಾರ ತುಂಬಿದ್ದರು. ಭುವನೇಶ್ವರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಮಾರಾಟ ಮಾಡುವುದು ಅವರ ಪ್ಲ್ಯಾನ್ ಆಗಿತ್ತು. ಈ ವೇಳೆ ನಾಲ್ವರು ವ್ಯಕ್ತಿಗಳ ಮೇಲೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ಚಿನ್ನ ಸಾಗಾಟ ಮಾಡುತ್ತಿರುವುದು ಬಯಲಾಗಿದೆ ಎಂದು ಭುವನೇಶ್ವರದ ಜಿಆರ್ ಪಿ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.ಈ ಆಭರಣಗಳಿಗೆ ಅವರು ತೆರಿಗೆ ಪಾವತಿಸುತ್ತಿರಲಿಲ್ಲ. ಹೀಗಾಗಿ ಈ ಚಿನ್ನವನ್ನು ಯಾರಿಗೆ ನೀಡುತ್ತಿದ್ದೇವೆ ಎಂಬುದನ್ನು ಸರಿಯಾಗಿ ಬಾಯಿಬಿಟ್ಟಿಲ್ಲ. ಒಟ್ಟಿನಲ್ಲಿ ಈ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇತ್ತ 32 ಕೆ.ಜಿ ಚಿನ್ನವನ್ನು ಜಿಆರ್‍ಪಿ ಅಧಿಕಾರಿಗಳು ಕೈಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು