10:06 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ರೈಲ್ವೆ ನಿಲ್ದಾಣದಲ್ಲಿ 16 ಕೋಟಿ ಮೌಲ್ಯದ GST ದಾಖಲೆಯಿಲ್ಲದ 32 ಕೆ.ಜಿ ಚಿನ್ನ ವಶ: ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಾಟ

03/03/2022, 13:53

ಭುವನೇಶ್ವರ(reporterkarnataka.com): ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್‍ಮೆಂಟ್ ರೈಲ್ವೇ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಂಬೈಯಿಂದ ಮಂಗಳವಾರ ರಾತ್ರಿ 11.30ರ ಸುಮಾರಿಗೆ ಭುವನೇಶ್ವರಕ್ಕೆ ಆಗಮಿಸಿದ ರೈಲಿನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದ್ದು, ಬುಧವಾರ ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ನಾಲ್ವರನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಧಿಕಾರಿಗಳ ವಶವಾದ ನಾಲ್ವರನ್ನು ಹಸ್ಮುಖಲಾಲ್ ದೀಕ್ಷಿತ್, ಮಹೇಶ್ ಭೋಮ್ಸರ್, ಸುರೇಶ್ ಸಹದೇವ್ ಖರೆ ಮತ್ತು ದೀಪಕ್ ಪಟೇಲ್ ಎಂದು ಗುರುತಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ(GST) ದಾಖಲೆಗಳನ್ನು ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಆರ್ ಪಿ  ಸ್ಪಷ್ಟಪಡಿಸಿದೆ.ನಾಲ್ವರು ವ್ಯಕ್ತಿಗಳು ಮುಂಬೈಯಿಂದ ನಾಲ್ಕು ಬ್ಯಾಗ್ ಗಳ ಜೊತೆ ಬಂದಿದ್ದರು. ಒಂದೊಂದು ಬ್ಯಾಗ್ ನಲ್ಲಿ ಸುಮಾರು 8 ಕೆ.ಜಿಯಷ್ಟು ಬಂಗಾರ ತುಂಬಿದ್ದರು. ಭುವನೇಶ್ವರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಮಾರಾಟ ಮಾಡುವುದು ಅವರ ಪ್ಲ್ಯಾನ್ ಆಗಿತ್ತು. ಈ ವೇಳೆ ನಾಲ್ವರು ವ್ಯಕ್ತಿಗಳ ಮೇಲೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ಚಿನ್ನ ಸಾಗಾಟ ಮಾಡುತ್ತಿರುವುದು ಬಯಲಾಗಿದೆ ಎಂದು ಭುವನೇಶ್ವರದ ಜಿಆರ್ ಪಿ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.ಈ ಆಭರಣಗಳಿಗೆ ಅವರು ತೆರಿಗೆ ಪಾವತಿಸುತ್ತಿರಲಿಲ್ಲ. ಹೀಗಾಗಿ ಈ ಚಿನ್ನವನ್ನು ಯಾರಿಗೆ ನೀಡುತ್ತಿದ್ದೇವೆ ಎಂಬುದನ್ನು ಸರಿಯಾಗಿ ಬಾಯಿಬಿಟ್ಟಿಲ್ಲ. ಒಟ್ಟಿನಲ್ಲಿ ಈ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇತ್ತ 32 ಕೆ.ಜಿ ಚಿನ್ನವನ್ನು ಜಿಆರ್‍ಪಿ ಅಧಿಕಾರಿಗಳು ಕೈಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು