7:24 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಅಥಣಿ: 4.80 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕುಮಠಳ್ಳಿ ಚಾಲನೆ 

04/03/2022, 11:24

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬೆಳಗಾವಿ ಜಿಲ್ಲೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಾಲೂಕಿನ ಬನ್ನೂರ್ ಸವದಿ ನಂದಗಾವ ಶೇಗುಣಸಿ ಸತ್ತಿ ಗ್ರಾಮಗಳಲ್ಲಿ ಸುಮಾರು 4 ಕೋಟಿ 80 ಲಕ್ಷ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ಹಿಂಜರಿಕೆಯಿಲ್ಲ. ಇನ್ನೂ ಹತ್ತು ಹಲವಾರು ಅಭಿವೃದ್ಧಿ ಯೋಜನೆಗಳು ಮಾಡುವುದಾಗಿ ಭರವಸೆ ನೀಡಿದರು. ನೆರೆ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಅಲ್ಪ ದೋಷದ ಬಗ್ಗೆ ನನ್ನ ಗಮನಕ್ಕೆ ಬಂದಿದೆ ಅದನ್ನು ಕೂಡಲೇ ಸರಿಪಡಿಸಿ ತಕ್ಕ ಫಲಾನುಭವಿಗಳಿಗೆ ನ್ಯಾಯ ಕೊಡಿಸುವುದು ನಮ್ಮ ಧರ್ಮ. ಕೃಷ್ಣ ತೀರದ ನೆರೆಪೀಡಿತ ಸುಮಾರು 23 ಗ್ರಾಮಗಳ ಸವಳು ಜವಳಿನ ಅಭಿವೃದ್ಧಿ ಯೋಜನೆ ಹಾಗೂ ಬರಪೀಡಿತ ಭಾಗವಾದ ಕಕಮರಿ ಕೊಟ್ಟಲಗಿ ಏತನೀರಾವರಿ ಸುಮಾರು 948 ಕೋಟಿ ರೂಪಾಯಿ ಬೋರ್ಡ್ ಕ್ಲಿಯರನ್ಸ್ ಆಗಿದ್ದು ಅದನ್ನು ಕೂಡ ಬಹುಬೇಗನೆ ಮುಗಿಸಿಕೊಡುವ ಭರವಸೆ  ನೀಡಿದರು. ಮಹಾರಾಷ್ಟ್ರದಿಂದ ಬೇಸಿಗೆ ಕಾಲದಲ್ಲಿ ಕೃಷ್ಣಾನದಿಗೆ ಸುಮಾರು 4 ಟಿಎಂಸಿ ನೀರು ತರುವ ನಿರೀಕ್ಷೆಯಲ್ಲಿದ್ದೇವೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು ಇದೇ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರಾದ ವಿವೇಕ್ ನರಗೊಂಡ್ ಮಾತನಾಡಿ,ಶಾಸಕ ಮಹೇಶ್ ಕುಮಠಳ್ಳಿ ಅವರ ಕಾರ್ಯಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಬರುವ ದಿನಮಾನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಯೋಜನೆಗಳ ನಿರೀಕ್ಷೆಯಲ್ಲಿದ್ದೇವೆ ಪೂರ್ಣಗೊಳಿಸುತ್ತಾರೆ ಎನ್ನುವ ಭರವಸೆಯೂ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು