10:29 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಮಾರ್ಚ್ 5ರಿಂದ 8: ಸೂಟರ್ ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ; 6ರಂದು ‘ರಾಜಸವಾರಿ’

04/03/2022, 11:32

ಮಂಗಳೂರು(reporterkarnataka.com): ನಗರದ ಸೂಟರ್  ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಮಾರ್ಚ್ 5ರಿಂದ 8ರ ವರೆಗೆ ನಡೆಯಲಿದೆ.

ಮಾ. 5ರಂದು ಬೆಳಗ್ಗೆ ಹೋಮ ಮತ್ತು ಭಂಡಾರ ಏರುವುದು ನಡೆಯಲಿದೆ. ರಾತ್ರಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ತನ್ನಿ ಮಾನಿಗ ನೇಮೋತ್ಸವ ಜರುಗಲಿದೆ. ಮಾ.6ರಂದು ಸಂಜೆ ಶ್ರೀ ರಾಹು ಗುಳಿಗ ನೇಮ ಮತ್ತು ರಾತ್ರಿ ಶ್ರೀ ಪಂಜುರ್ಲಿ, ಗುಳಿಗೆ ನೇಮೋತ್ಸವ ಸಂಪನ್ನಗೊಳ್ಳಿದೆ. ಮಾ. 7ರಂದು ಮಧ್ಯಾಹ್ನ ಧರ್ಮದೈವದ ನೇಮ ಹಾಗೂ ಶ್ರೀ ಸುಬ್ಬಿಗುಳಿಗ ಹಾಗೂ ಸುಬ್ಯಮ್ಮ ನೇಮೋತ್ಸವ ನಡೆಯಲಿದೆ. ಮಾ.8ರಂದು ಮಧ್ಯಾಹ್ನ ಶ್ರೀ ಸಂಕಲೆ ಗುಳಿಗ ನೇಮ ಹಾಗೂ ರಾತ್ರಿ ಕೊರಗಜ್ಜ ನೇಮ ಮತ್ತು ಭಂಡಾರ ಇಳಿಸುವುದು ನಡೆಯಲಿದೆ.

ಮಾ.6ರಂದು ಬೆಳಗ್ಗೆ ಭಗವಾನ್ ಶ್ರೀ ಬಬ್ಬುಸ್ವಾಮಿಯ ‘ರಾಜಸವಾರಿ’ ದೈವಸ್ಥಾನದಿಂದ ಸೂಟರ್ ಪೇಟೆ ಮುಖ್ಯರಸ್ತೆಯಲ್ಲಿರುವ ಮಹಾದ್ವಾರದವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು