6:17 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ರಾಜ್ಯಪಾಲರ ಭೇಟಿ: ಕಾರ್ಕಳ ಉತ್ಸವಕ್ಕೆ ಆಹ್ವಾನ; ಸೌಹಾರ್ದಯುತ ಚರ್ಚೆ

04/03/2022, 19:26

ಬೆಂಗಳೂರು(reporterkarnataka.com): 
ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್
ಶುಕ್ರವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಚರ್ಚೆ ನಡೆಸಿದ್ದಾರೆ.

ಮಾರ್ಚ್ 10 ರಿಂದ 20ರವರೆಗೆ ನಡೆಯಲಿರುವ ಕಾರ್ಕಳ ಉತ್ಸವಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿರುವ ಅವರು ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುವುದರ ಜತೆಗೆ ಉತ್ಸವದ ವೈಶಿಷ್ಟ್ಯ ಗಳನ್ನು ವಿವರಿಸಿದ್ದಾರೆ.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದೊಂದಿಗೆ ಮಾರ್ಚ್ ೧೦ರಿಂದ ೨೦ರ ವರೆಗೆ ಕಾರ್ಕಳ ಉತ್ಸವ ಆಯೋಜಿಸಲಾಗಿದೆ. ತುಳು ನಾಡಿನ ಸಾಂಸ್ಕ್ರತಿಕ ಬದುಕಿನ ಅನಾವರಣದ ಜತೆಗೆ ಕೋವಿಡ್ ನಿಂದ ಏಕತಾನತೆಗೆ ಸಿಲುಕಿದ್ದ ತಾಲೂಕಿನ ಜನಜೀವನಕ್ಕೆ ಉತ್ಸಾಹ ಹಂಚುವ ಉದ್ದೇಶವನ್ನು ಉತ್ಸವ ಹೊಂದಿದೆ.

ಉತ್ಸವ ಕಾರ್ಕಳದಲ್ಲಿ ನಡೆಯುತ್ತಿದ್ದರೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈಗಾಗಲೇ ಸದ್ದು ಮಾಡುತ್ತಿದೆ. ತುಳುನಾಡಿನ ಸಾಂಸ್ಕ್ರತಿಕ ವೈಭವ ಉತ್ಸವದ ಜೀವಾಳವಾಗಿದೆ.

ಈ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯ ಭರದಿಂದ ನಡೆಯುತ್ತಿದ್ದು, ಗಣ್ಯಾತಿಗಣ್ಯರು, ಅನಿವಾಸಿ ಕಾರ್ಕಳ ಜನರು ಸೇರಿದಂತೆ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು