11:52 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!!

05/03/2022, 09:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ.

ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ”(26) ಆತ್ಮಹತ್ಯೆಗೆ ಶರಣಾದ ಯುವಕ.

ಒಂದು ವರ್ಷದ ಹಿಂದೆ ಅಷ್ಟೇ ಮಹಾರಾಷ್ಟ್ರದ ಸಾಂಗ್ಲಿ ನಗರದ ಯೋಗೀತಾ ಜೋತೆ ಸುನೀಲ ವಿವಾಹವಾಗಿತ್ತು. ಮದುವೆಯ ನಂತರ ಆರು ತಿಂಗಳ ವರೆಗೆ ದಾಂಪತ್ಯ ಜೀವನ ಚನ್ನಾಗಿಯೇ ನಡೆದಿತ್ತು. ಸುನೀಲ ತನ್ನ ದಿನನಿತ್ಯದ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡು ತಂದೆ,ತಾಯಿ ಹಾಗೂ ಒಬ್ಬ ಸಹೋದರನ ಜತೆ ಒಂದೇ ಕುಟುಂಬದಲ್ಲಿ ವಾಸವಿದ್ದರೂ.

ಎರಡು ತಿಂಗಳ ಹಿಂದೆ ಸುನೀಲ ಪತ್ನಿ ಯೋಗೀತಾ  ತವರಮನೆಗೆ ಹೋಗಿ ಬರುತ್ತೇನೆ ಅಂತಾ ಹೋದವಳು ನಂತರ ಮರಳಿ ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ. ಸುನೀಲ ತಂದೆ ತಾಯಿ ಕೂಡಾ ಯೋಗೀತಾ ಬರಲು ಮನವಲಿಸಿದರು ಕೂಡಾ ಬಾರಲು ನಿರಾಕರಿದದಕ್ಕೆ ಮನ ನೊಂದು ಸುನೀಲ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. 

ಮೃತನ ಪತ್ನಿ ಯೋಗೀತಾ ಕೊನೆಯ ಪಕ್ಷ ಅಂತ್ಯ ಸೌಂಸ್ಕಾರಕ್ಕೂ ಬಾರದೆ ಇರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು ಮೃತ ಸುನೀಲ ತಂದೆ ಅರ್ಜುನ್ ಹೊಕ್ಕುಂಡಿ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು