3:09 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!!

05/03/2022, 09:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ.

ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ”(26) ಆತ್ಮಹತ್ಯೆಗೆ ಶರಣಾದ ಯುವಕ.

ಒಂದು ವರ್ಷದ ಹಿಂದೆ ಅಷ್ಟೇ ಮಹಾರಾಷ್ಟ್ರದ ಸಾಂಗ್ಲಿ ನಗರದ ಯೋಗೀತಾ ಜೋತೆ ಸುನೀಲ ವಿವಾಹವಾಗಿತ್ತು. ಮದುವೆಯ ನಂತರ ಆರು ತಿಂಗಳ ವರೆಗೆ ದಾಂಪತ್ಯ ಜೀವನ ಚನ್ನಾಗಿಯೇ ನಡೆದಿತ್ತು. ಸುನೀಲ ತನ್ನ ದಿನನಿತ್ಯದ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡು ತಂದೆ,ತಾಯಿ ಹಾಗೂ ಒಬ್ಬ ಸಹೋದರನ ಜತೆ ಒಂದೇ ಕುಟುಂಬದಲ್ಲಿ ವಾಸವಿದ್ದರೂ.

ಎರಡು ತಿಂಗಳ ಹಿಂದೆ ಸುನೀಲ ಪತ್ನಿ ಯೋಗೀತಾ  ತವರಮನೆಗೆ ಹೋಗಿ ಬರುತ್ತೇನೆ ಅಂತಾ ಹೋದವಳು ನಂತರ ಮರಳಿ ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ. ಸುನೀಲ ತಂದೆ ತಾಯಿ ಕೂಡಾ ಯೋಗೀತಾ ಬರಲು ಮನವಲಿಸಿದರು ಕೂಡಾ ಬಾರಲು ನಿರಾಕರಿದದಕ್ಕೆ ಮನ ನೊಂದು ಸುನೀಲ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. 

ಮೃತನ ಪತ್ನಿ ಯೋಗೀತಾ ಕೊನೆಯ ಪಕ್ಷ ಅಂತ್ಯ ಸೌಂಸ್ಕಾರಕ್ಕೂ ಬಾರದೆ ಇರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು ಮೃತ ಸುನೀಲ ತಂದೆ ಅರ್ಜುನ್ ಹೊಕ್ಕುಂಡಿ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು