6:00 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!!

05/03/2022, 09:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ.

ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ”(26) ಆತ್ಮಹತ್ಯೆಗೆ ಶರಣಾದ ಯುವಕ.

ಒಂದು ವರ್ಷದ ಹಿಂದೆ ಅಷ್ಟೇ ಮಹಾರಾಷ್ಟ್ರದ ಸಾಂಗ್ಲಿ ನಗರದ ಯೋಗೀತಾ ಜೋತೆ ಸುನೀಲ ವಿವಾಹವಾಗಿತ್ತು. ಮದುವೆಯ ನಂತರ ಆರು ತಿಂಗಳ ವರೆಗೆ ದಾಂಪತ್ಯ ಜೀವನ ಚನ್ನಾಗಿಯೇ ನಡೆದಿತ್ತು. ಸುನೀಲ ತನ್ನ ದಿನನಿತ್ಯದ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡು ತಂದೆ,ತಾಯಿ ಹಾಗೂ ಒಬ್ಬ ಸಹೋದರನ ಜತೆ ಒಂದೇ ಕುಟುಂಬದಲ್ಲಿ ವಾಸವಿದ್ದರೂ.

ಎರಡು ತಿಂಗಳ ಹಿಂದೆ ಸುನೀಲ ಪತ್ನಿ ಯೋಗೀತಾ  ತವರಮನೆಗೆ ಹೋಗಿ ಬರುತ್ತೇನೆ ಅಂತಾ ಹೋದವಳು ನಂತರ ಮರಳಿ ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ. ಸುನೀಲ ತಂದೆ ತಾಯಿ ಕೂಡಾ ಯೋಗೀತಾ ಬರಲು ಮನವಲಿಸಿದರು ಕೂಡಾ ಬಾರಲು ನಿರಾಕರಿದದಕ್ಕೆ ಮನ ನೊಂದು ಸುನೀಲ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. 

ಮೃತನ ಪತ್ನಿ ಯೋಗೀತಾ ಕೊನೆಯ ಪಕ್ಷ ಅಂತ್ಯ ಸೌಂಸ್ಕಾರಕ್ಕೂ ಬಾರದೆ ಇರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು ಮೃತ ಸುನೀಲ ತಂದೆ ಅರ್ಜುನ್ ಹೊಕ್ಕುಂಡಿ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು